AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು

ಮಗಳು ಪ್ರೀತಿ ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು
ಶಿವಾನಿ-ರಾಧೆಶ್ಯಾಂImage Credit source: NDTV
ನಯನಾ ರಾಜೀವ್
|

Updated on: Jun 19, 2023 | 10:23 AM

Share

ಮಗಳು ಪ್ರೀತಿ(Love)ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತನ್​ಬಸಾಯ್​ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಶಿವಾನಿ ತೋಮರ್ ರಾಧೆಶ್ಯಾಮ್ ತೋಮರ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆತ ಪಕ್ಕದ ಪೊರೆನಾ ಜಿಲ್ಲೆಯ ಬಾಲುಪುರದವನು. ಈ ಯುವಕನನ್ನು ಪ್ರೀತಿಸುವ ಕುರಿತು ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಇಬ್ಬರೂ ಕಾಣೆಯಾಗಿದ್ದರು, ಹುಡುಗನ ತಂದೆ ಪ್ರಕರಣ ದಾಖಲಿಸಿದ್ದರು, ಕಳೆದ ಕೆಲವು ದಿನಗಳಿಂದ ಇಬ್ಬರೂ ಕಾಣೆಯಾಗಿದ್ದಾರೆ ಅವರನ್ನು ಹತ್ಯೆ ಮಾಡಿರಬಹುದು ಎನ್ನುವ ಸಂದೇಹವಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಮತ್ತಷ್ಟು ಓದಿ: Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಮೊದ ಮೊದಲು ಪೊಲೀಸರು ಅವರಿಬ್ಬರು ಓಡಿ ಹೋಗಿರಬಹುದು ಎಂದುಕೊಂಡಿದ್ದರು. ಆದರೆ ಅವರಿಬ್ಬರು ಹೋಗಿರುವುದಾಗಲಿ, ಇಬ್ಬರು ಎಲ್ಲಿದ್ದಾರೆ ಎಂಬುದಾಗಲಿ ಊರಿನ ಒಬ್ಬರಿಗೂ ತಿಳಿದಿರಲಿಲ್ಲ. ಬಳಿಕ ಯುವತಿಯ ತಂದೆಯನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ, ಬಳಿಕ ಯುವತಿ ತಂದೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಜೂನ್ 3ರಂದು ಶಿವಾನಿ ಹಾಗೂ ರಾಧೆಶ್ಯಾಮ್​ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು, ಬಳಿಕ ದೇಹಕ್ಕೆ ಕಲ್ಲು ಕಟ್ಟಿ, ಮೊಸಳೆಗಳಿರುವ ಚಂಬಲ್ ನದಿಯಲ್ಲಿ ಎಸೆಯಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?