AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು

ಮಗಳು ಪ್ರೀತಿ ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ

Bhopal: ಮರ್ಯಾದಾ ಹತ್ಯೆ: ಪ್ರೇಮಿಗಳ ಹತ್ಯೆ ಮಾಡಿ, ದೇಹಕ್ಕೆ ಕಲ್ಲುಕಟ್ಟಿ ಮೊಸಳೆಗಳಿರುವ ನದಿಗೆ ಎಸೆದಿದ್ದ ಪೋಷಕರು
ಶಿವಾನಿ-ರಾಧೆಶ್ಯಾಂImage Credit source: NDTV
ನಯನಾ ರಾಜೀವ್
|

Updated on: Jun 19, 2023 | 10:23 AM

Share

ಮಗಳು ಪ್ರೀತಿ(Love)ಮಾಡುವುದು ಇಷ್ಟವಿಲ್ಲದೆ ಆಕೆಯ ಕುಟುಂಬಸ್ಥರು ಪ್ರೇಮಿಗಳಿಬ್ಬರನ್ನೂ ಕೊಂದು ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತನ್​ಬಸಾಯ್​ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಶಿವಾನಿ ತೋಮರ್ ರಾಧೆಶ್ಯಾಮ್ ತೋಮರ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆತ ಪಕ್ಕದ ಪೊರೆನಾ ಜಿಲ್ಲೆಯ ಬಾಲುಪುರದವನು. ಈ ಯುವಕನನ್ನು ಪ್ರೀತಿಸುವ ಕುರಿತು ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಇಬ್ಬರೂ ಕಾಣೆಯಾಗಿದ್ದರು, ಹುಡುಗನ ತಂದೆ ಪ್ರಕರಣ ದಾಖಲಿಸಿದ್ದರು, ಕಳೆದ ಕೆಲವು ದಿನಗಳಿಂದ ಇಬ್ಬರೂ ಕಾಣೆಯಾಗಿದ್ದಾರೆ ಅವರನ್ನು ಹತ್ಯೆ ಮಾಡಿರಬಹುದು ಎನ್ನುವ ಸಂದೇಹವಿದೆ ಎಂದು ದೂರಿನಲ್ಲಿ ತಿಳಿಸಿದ್ದರು.

ಮತ್ತಷ್ಟು ಓದಿ: Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಮೊದ ಮೊದಲು ಪೊಲೀಸರು ಅವರಿಬ್ಬರು ಓಡಿ ಹೋಗಿರಬಹುದು ಎಂದುಕೊಂಡಿದ್ದರು. ಆದರೆ ಅವರಿಬ್ಬರು ಹೋಗಿರುವುದಾಗಲಿ, ಇಬ್ಬರು ಎಲ್ಲಿದ್ದಾರೆ ಎಂಬುದಾಗಲಿ ಊರಿನ ಒಬ್ಬರಿಗೂ ತಿಳಿದಿರಲಿಲ್ಲ. ಬಳಿಕ ಯುವತಿಯ ತಂದೆಯನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ, ಬಳಿಕ ಯುವತಿ ತಂದೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಜೂನ್ 3ರಂದು ಶಿವಾನಿ ಹಾಗೂ ರಾಧೆಶ್ಯಾಮ್​ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು, ಬಳಿಕ ದೇಹಕ್ಕೆ ಕಲ್ಲು ಕಟ್ಟಿ, ಮೊಸಳೆಗಳಿರುವ ಚಂಬಲ್ ನದಿಯಲ್ಲಿ ಎಸೆಯಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ