AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ: ಕಾಣೆಯಾಗಿದ್ದ ದಲಿತ ಬಾಲಕಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ; ಆಕೆಯಿಂದ ಅವಮಾನವಾಯ್ತೆಂದು ಕೊಲೆ?

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಲಿತ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಕುರಿಗಾಹಿಗಳು ಕುರಿ ಕಾಯಲು ಹೋದ ವೇಳೆ ಬಾಲಕಿ ಕೊಲೆಯಾದ ಸ್ಥಿತಿಯಲ್ಲಿ ಕಂಡು ಪೋಷಕರಿಗೆ ಮಾಹಿತಿ ನೀಡಿದ್ದರು. ದಲಿತ ಬಾಲಕಿಯಿಂದ ಅವಮಾನವಾಯ್ತು ಅಂತ ಸವರ್ಣಿಯ ಗುಂಪಿಗೆ ಸೇರಿದ ಯುವಕನಿಂದ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹೊಸಕೋಟೆ: ಕಾಣೆಯಾಗಿದ್ದ ದಲಿತ ಬಾಲಕಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ; ಆಕೆಯಿಂದ ಅವಮಾನವಾಯ್ತೆಂದು ಕೊಲೆ?
ಕಾಣೆಯಾಗಿದ್ದ ದಲಿತ ಬಾಲಕಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ; ಆಕೆಯಿಂದ ಅವಮಾನವಾಯ್ತೆಂದು ಆರೋಪಿ ನಿತಿನ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ
ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on: Feb 09, 2024 | 12:14 PM

Share

ದೇವನಹಳ್ಳಿ, ಫೆ.9: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಲಿತ ಬಾಲಕಿ ಕೊಲೆಯಾದ (Murder) ಸ್ಥಿತಿಯಲ್ಲಿ ನಿನ್ನೆ ಪತ್ತೆಯಾಗಿದ್ದು, ದಲಿತ ಬಾಲಕಿಯಿಂದ ಅವಮಾನವಾಯ್ತು ಅಂತ ಸವರ್ಣಿಯ ಗುಂಪಿಗೆ ಸೇರಿದ ಯುವಕನಿಂದ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬಾಲಕಿ 20 ದಿನಗಳ ಹಿಂದೆ ಶಾಲೆಗೆ ಹೋಗುತ್ತಿದ್ದಾಗ ನಿತಿನ್ ಎಂಬಾತ ಚುಡಾಯಿಸಿದ್ದನು. ಇದನ್ನು ಪ್ರಶ್ನಿಸಿದ್ದಕ್ಕೆ ನಿತಿನ್ ಬಾಲಕಿ ಮೇಲೆ ಹಲ್ಲೆ ನಡೆಸಿದ್ದನು. ಈ ವಿಚಾರವನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಮಾಲೂರು ಠಾಣಾ ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಎರಡು ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಪಂಚಾಯಿತಿ ನಡೆಸಿದ್ದರು.

ಇದನ್ನೂ ಓದಿ: ಮಗಳಿಗೆ ವರನನ್ನು ಹುಡುಕಲು ಕೊಲೆ ಆರೋಪಿಗೆ 45 ದಿನಗಳ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್​

ರಾಜಿ ಪಂಚಾಯತಿ ನಡೆದ ಮೂರು ದಿನಗಳ ಬಳಿಕ ಬಾಲಕಿ ನಾಪತ್ತೆಯಾಗಿದ್ದಳು. ನಿನ್ನೆ ಕುರಿಹಾಗಿಗಳು ಕುರಿ ಕಾಯಲು ಹೋಗಿದ್ದಾಗ ಬಾಲಕಿಯ ಶವಕಂಡು ಪೋಷಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈಟ್ ಫಿಲ್ಡ್​ನ ವೈದೇಹಿ ಆಸ್ವತ್ರೆಗೆ ರವಾನಿಸಿದ್ದಾರೆ.

ಅವಮಾನಕ್ಕೆ ಬಾಲಕಿಯ ಕೊಲೆ

ದಲೊತ ಬಾಲಕಿಯಿಂದ ಅವಮಾನವಾಯ್ತು ಅಂತ ಸವರ್ಣಿಯ ಗುಂಪಿಗೆ ಸೇರಿದ ಯುವಕ ನಿತಿನ್ ಕೊಲೆ ಆರೋಪ ಕೇಳಿಬಂದಿದೆ. ಕೊಲೆ ನಂತರ ಆರೋಪಿ ಗ್ರಾಮದಲ್ಲೇ ಒಡಾಡಿಕೊಂಡಿದ್ದನು. ಕೊಲೆ ವಿಚಾರ ಬಯಲಿಗೆ ಬರುತ್ತಿದ್ದಂತೆ ನಿತಿನ್ ಕತ್ತುಕೊಯ್ದುಕೊಂಡಿದ್ದಾನೆ. ಕೊಲೆ ಮಾಡಿ ಕತ್ತು ಕೊಯ್ದುಕೊಂಡು ಡ್ರಾಮ ಮಾಡುತ್ತಿದ್ದಾನೆ ಅಂತ ಮೃತ ಬಾಲಕಿ ಕುಟುಂಬಸ್ಥರು ಆರೋಪಿಸಿದ್ದು, ಆರೋಪಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಕಾರಣ ಬಾಲಕಿ ಕೊಲೆಯಾಗಿದೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಪ್ರಕರಣ ಸಂಬಂಧ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ