AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?

ಇಳಿ ವಯಸ್ಸಿನಲ್ಲು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ ವೃದ್ದ ದಂಪತಿ ಭೀಕರವಾಗಿ ಕೊಲೆಯಾಗಿರುವುದು ದುರಂತ. ಇನ್ನು, ಕೊಲೆ ಮಾಡಿದ್ದು ಯಾರು ಯಾವ ಕಾರಣಕ್ಕೆ ಅನ್ನೂ ಬಗ್ಗೆ ಸೂಲಿಬೆಲೆ ಪೊಲೀಸರು ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸೂಲಿಬೆಲೆ- ರಾಡ್ ನಿಂದ ಹೊಡೆದು ವೃದ್ದ ದಂಪತಿಯ ಹತ್ಯೆ, ಕೋಟಿ ಕೋಟಿ ಆಸ್ತಿ ವಿಚಾರಕ್ಕೆ ನಡೆಯಿತಾ ಕಗ್ಗೊಲೆ?
ಸೂಲಿಬೆಲೆ- ರಾಡ್ ನಿಂದ ಹೊಡೆದು ಮನೆಯಲ್ಲಿ ವೃದ್ದ ದಂಪತಿಯ ಹತ್ಯೆ
ನವೀನ್ ಕುಮಾರ್ ಟಿ
| Edited By: |

Updated on:Dec 11, 2023 | 10:52 AM

Share

ಸಿಲಿಕಾನ್ ಸಿಟಿ ಪಕ್ಕದಲ್ಲಿರುವ ಗ್ರಾಮ (Hoskote Sulibele Police) ಅದು. ಆ ಗ್ರಾಮದ ಸುತ್ತಾಮುತ್ತಲಿನ ಜಮೀನು ಕೋಟಿ ಕೋಟಿ ಬೆಲೆ ಬಾಳ್ತಿದ್ದು ವೃದ್ದ ದಂಪತಿ ತಮಗೆ ಇರೋ ಜಮೀನಿನಲ್ಲಿ (property) ವ್ಯವಸಾಯ ಮಾಡಿಕೊಂಡಿದ್ರು. ಆದ್ರೆ ಚೆನ್ನಾಗಿದ್ದ ವೃದ್ದ ದಂಪತಿ ಮೊನ್ನೆ ಸಂಜೆ ಹೆಣವಾಗಿ ತಮ್ಮದೆ ಮನೆಯಲ್ಲಿ ಪತ್ತೆಯಾಗಿದ್ದು ಸಹೋದರ ಸಹೋದರಿಯರ ನಡುವೆಯೆ ಹೈಡ್ರಾಮ ನಡೆದು ಹೋಗಿದೆ. ಕಗ್ಗತ್ತಲ ರಾತ್ರಿಯಲ್ಲಿ ಮನೆ ಮುಂದೆ ಆಕ್ರಂದನ ಮುಗಿಲು ಮುಟ್ಟಿದೆ. ಹೆಣ್ಣು ಮಕ್ಕಳು ಹೆತ್ತ ತಂದೆ ತಾಯಿಯನ್ನ ನೆನೆದು ಕಣ್ಣೀರು ಹಾಕುತ್ತಾ, ಶಾಪ ಹಾಕ್ತಿದ್ರೆ ಇತ್ತ ಕುಟುಂಬಸ್ಥರು ಮನೆಗೆ ನುಗ್ಗಿ ಎಲ್ಲರ ಮೇಲೂ ಆಕ್ರೋಶ, ಸಿಟ್ಟನ್ನು ಉಗುಳುತ್ತಿದ್ದಾರೆ. ಅಂದಹಾಗೆ ಈ ರೀತಿ ಕಗ್ಗತ್ತಲ ರಾತ್ರಿಯಲ್ಲಿ ಇವರೆಲ್ಲ ಆಕ್ರಂದನದ ಜೊತೆಗೆ ಆಕ್ರೋಶ ಹೊರ ಹಾಕಲು ಕಾರಣ ಇದೇ ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಎಂಬುವವರ ಭೀಕರ ಕೊಲೆ (couple murder).

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿಗಳಾದ ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಅನ್ನೂ ಈ ದಂಪತಿಗೆ ಒರ್ವ ಗಂಡು ಮಗು ನಾಲ್ಕು ಜನ ಹೆಣ್ಣು ಮಕ್ಕಳಿದ್ದು ಎಲ್ಲರಿಗೂ ಮದುವೆ ಮಾಡಿ ಇಳಿ ವಯಸ್ಸಿನಲ್ಲಿ ಇಬ್ಬರೂ ಪ್ರತ್ಯೇಕವಾಗಿ ವಾಸವಾಗಿದ್ರು. ಜೊತೆಗೆ ಕೈಲಾದ ಕೆಲಸ ಮಾಡಿಕೊಂಡಿದ್ದ ದಂಪತಿಗೆ ನಿತ್ಯ ಹೆಣ್ಣು ಮಕ್ಕಳು ಕರೆ ಮಾಡಿ ಮಾತನಾಡ್ತಿದ್ದು ಎಂದಿನಂತೆ ಶನಿವಾರ ರಾತ್ರಿಯೂ ಕರೆ ಮಾಡಿದ್ದಾರೆ. ಆದ್ರೆ ಎಷ್ಟೇ ಕರೆ ಮಾಡಿದ್ರು ಯಾರೊಬ್ಬರೂ ಕರೆ ಸ್ವೀಕರಿಸದಿದ್ದು ಅನುಮಾನಗೊಂಡ ಮಗಳು ಇಂದು ಸಂಜೆ ಸೂಲಿಬೆಲೆಯ ಮನೆ ಬಳಿಗೆ ಬಂದು ನೋಡಿದ್ದಾಳೆ. ಈ ವೇಳೆ ಮನೆ ಮುಂದೆ ವೃದ್ದರಿಬ್ಬರ ಚಪ್ಪಲಿ ಬಿದ್ದಿದ್ದು ಮನೆ ಬಾಗಿಲು ಮಾತ್ರ ಬೀಗ ಹಾಕಿರುವುದು ಕಂಡು ಬಂದಿದೆ. ಹೀಗಾಗಿ ಅನುಮಾನಗೊಂಡ ಮಗಳು ಮನೆ ಕಿಟಕಿ ತೆಗೆದು ನೋಡಿದಾಗ ಮನೆಯ ಒಳಗೆ ವೃದ್ದ ದಂಪತಿ ಬರ್ಬರವಾಗಿ ಕೊಲೆಯಾಗಿರುವ ಭೀಕರ ದೃಶ್ಯ ಕಂಡು ಬಂದಿದೆ.

ಮನೆಯಲ್ಲಿ ವೃದ್ದರು ಕೊಲೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಹೆಣ್ಣು ಮಕ್ಕಳು ಕುಟುಂಬಸ್ಥರು ಹಾಗೂ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಂದಿದ್ದಾರೆ. ಜೊತೆಗೆ ವೃದ್ದ ದಂಪತಿಗೆ ನರಸಿಂಹ ಅನ್ನೂ ಮಗ ಇದ್ದು ಮದುವೆಯಾದಗಲಿಂದಲೂ ಮಗ ಪ್ರತ್ಯೇಕವಾಗಿ ಪತ್ನಿ ಜೊತೆ ವಾಸವಾಗಿದ್ದು ತಂದೆ ತಾಯಿ ಮಗ ಹಾಗೂ ಸಹೋದರಿಯರ ನಡುವೆ ಒಂದಷ್ಟು ಕಲಹ ನಡೆಯುತ್ತಾ ಬಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಮಂಡ್ಯ – ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದ ಶಿಕ್ಷಕ, ಸಹಜ ಸಾವೆಂದು ಬಿಂಬಿಸಲು ಹೋಗಿ ಜೈಲು ಸೇರಿದ

ಜೊತೆಗೆ ದಂಪತಿಗೆ ಸೇರಿದ 2 ಎಕರೆ ಜಮೀನಿನಲ್ಲಿ ಹೆಣ್ಣು ಮಕ್ಕಳಿಗೂ ಪಾಲು ಕೊಡ್ತಿವಿ ಅಂತಿದ್ದು ಇದೇ ವಿಚಾರಕ್ಕೆ ಸಹೋದರ ಕಡೆಯವರೆ ಕೊ0ಲೆ ನಡೆಸಿರಬಹುದು ಅಂತ ಸಹೋದರಿಯರು ಆರೋಪಿಸಿದ್ದಾರೆ. ಅಲ್ಲದೆ ಸಹೋದರ ವಿರುದ್ದ ಮನೆ ಮುಂದೆ ನುಗ್ಗಿ ಆಕ್ರೋಶ ಹೊರ ಹಾಕಿದ್ದು ಎಲ್ಲರೂ ಗರಂ ಆಗ್ತಿದ್ದಂತೆ ದಂಪತಿಯ ಮಗ ನರಸಿಂಹನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಒಟ್ಟಾರೆ ಇಳಿ ವಯಸ್ಸಿನಲ್ಲು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡು ಜೀವನ ನಡೆಸುತ್ತಿದ್ದ ವೃದ್ದ ದಂಪತಿ ಭೀಕರವಾಗಿ ಕೊಲೆಯಾಗಿರುವುದು ನಿಜಕ್ಕೂ ದುರಂತ. ಇನ್ನು, ಕೊಲೆ ಮಾಡಿದ್ದು ಯಾರು ಯಾವ ಕಾರಣಕ್ಕೆ ಅನ್ನೂ ಬಗ್ಗೆ ಸೂಲಿಬೆಲೆ ಪೊಲೀಸರು ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸುತ್ತಿದ್ದು ತನಿಖೆ ನಂತರ ಸಹೋದರಿಯರ ಆರೋಪ ನಿಜವಾ, ಸುಳ್ಳಾ ಅನ್ನೂದು ಬೆಳಕಿಗೆ ಬರಲಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 am, Mon, 11 December 23

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!