AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಪ್ರೀತಿಸುವ ನಾಟಕವಾಡಿ 10ಕ್ಕೂ ಹೆಚ್ಚು ಮಹಿಳೆಯರೊಂದಿಗೆ ರಾಸಲೀಲೆ, ಆರೋಪಿ ಅರೆಸ್ಟ್​

ಹುಬ್ಬಳ್ಳಿಯಲ್ಲಿ 38 ವರ್ಷದ ಅಶ್ಪಾಕ್ ಜೋಗನ್‌ಕೊಪ್ಪ ಎಂಬಾತನನ್ನು ಕಸಬಾಪೇಟ ಪೊಲೀಸರು ಬಂಧಿಸಿದ್ದಾರೆ. ಅವನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಹಲವು ಮಹಿಳೆಯರ ಮೇಲೂ ಇಂತಹ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಮೊಬೈಲ್‌ನಿಂದ ಹಲವು ವಿಡಿಯೋಗಳನ್ನು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ: ಪ್ರೀತಿಸುವ ನಾಟಕವಾಡಿ 10ಕ್ಕೂ ಹೆಚ್ಚು ಮಹಿಳೆಯರೊಂದಿಗೆ ರಾಸಲೀಲೆ, ಆರೋಪಿ ಅರೆಸ್ಟ್​
ಆರೋಪಿ ಅಶ್ಪಾಕ್ ಜೋಗನ್‌ಕೊಪ್ಪ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Jan 18, 2025 | 2:41 PM

Share

ಹುಬ್ಬಳ್ಳಿ, ಜನವರಿ 18: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ​ ಮಾಡುತ್ತಿದ್ದ ಆರೋಪಿಯನ್ನು ಕಸಬಾಪೇಟ ಠಾಣೆ ಪೊಲೀಸರು (Kasabapet Police Station) ಬಂಧಿಸಿದ್ದಾರೆ. ಅಶ್ಪಾಕ್ ಜೋಗನ್‌ಕೊಪ್ಪ (38) ಅತ್ಯಾಚಾರ ಎಸಗಿದ ಆರೋಪಿ. ಹುಬ್ಬಳ್ಳಿಯ (Hubballi) ಶರಾವತಿ ನಗರದ ಕೆಇಬಿ ಲೇಔಟ್ ನಿವಾಸಿಯಾಗಿರುವ ಅಶ್ಪಾಕ್ ಜೋಗನ್‌ಕೊಪ್ಪ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಝರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಅಂಗಡಿ ಇಟ್ಟುಕೊಂಡಿದ್ದಾನೆ.

ಅಶ್ಪಾಕ್ ಜೋಗನ್‌ಕೊಪ್ಪ ತನ್ನ ಅಂಗಡಿಗೆ ಬರುವ ಬಡ ಹೆಣ್ಣುಮಕ್ಕಳ ಜೊತೆ ಬಣ್ಣ ಬಣ್ಣದ ಮಾತುಗಳನ್ನು ಆಡಿ, ಬುಟ್ಟಿಗೆ ಬೀಳಿಸಿಕೊಳ್ಳುತ್ತಿದ್ದನು. ಬಳಿಕ, ಅವರಿಗೆ ಹಣದಾಸೆ ತೋರಿಸಿ ಪ್ರೀತಿಸುವ ನಾಟಕವಾಡುತ್ತಿದ್ದನು. ನಂತರ, ಪ್ರೀತಿಯ ಹೆಸರಿನಲ್ಲಿ ಮಂಚಕ್ಕೆ ಕರೆಯುತ್ತಿದ್ದನು. ಅಲ್ಲಿ, ಖಾಸಗಿ ಕ್ಷಣಗಳ ದೃಶ್ಯಗಳನ್ನು ಮೊಬೈಲ್​ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಳುತ್ತಿದ್ದನು.

ಇದನ್ನೂ ಓದಿ: ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿದ ಅಪ್ಪ-ಅಮ್ಮ

ಈ ರಾಸಲೀಲೆಯ ವಿಡಿಯೋಗಳನ್ನು ಮತ್ತು ಇಟ್ಟುಕೊಂಡು “ನಾನು ಹೇಳಿದಂತೆ ಕೇಳು” ಎಂದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಈ ರೀತಿಯಾಗಿ 10ಕ್ಕೂ ಹೆಚ್ಚು ಮಹಿಳೆಯರು ‌ಮತ್ತು ಅಪ್ರಾಪ್ತ ಬಾಲಕಿಯರ ಜೊತೆ ಚೆಲ್ಲಾಟವಾಡುತ್ತಿದ್ದನು. ಇಷ್ಟಕ್ಕೇ ಸುಮ್ಮನಾಗದ ಆರೋಪಿ ಆಶ್ಪಕ್​ ಮಹಿಳೆಯರಿಗೆ ವಿಡಿಯೋ ಕರೆ ಮಾಡಿ, ಖಾಸಗಿ ಅಂಗಾಂಗಳನ್ನು ತೋರಿಸುವಂತೆ ಹೇಳುತ್ತಿದ್ದನು. ಮಹಿಳೆಯರು ನಗ್ನವಾದ ಬಳಿಕ, ಸ್ಕ್ರೀನ್​ ರೆಕಾರ್ಡ್​ ಮಾಡಿಕೊಳ್ಳುತ್ತಿದ್ದನು.

ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯ ಪೋಷಕರು ಅಶ್ಪಾಕ್ ಜೋಗನ್‌ಕೊಪ್ಪ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಕಸಬಾ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ, ಆರೋಪಿ ಅಶ್ಪಾಕ್ ಜೋಗನ್‌ಕೊಪ್ಪನನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಅಶ್ಪಾಕ್ ಜೋಗನ್‌ಕೊಪ್ಪ ಮೊಬೈಲ್‌ನಲ್ಲಿ 10ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಆಡಿದ ರಾಸಲೀಲೆಯ ವಿಡಿಯೋ‌ಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಬೈಲ್​ ಮೂಲಕ ಹಲವು ಮಾಹಿತಿ ಬಹಿರಂಗ: ಪೊಲೀಸ್​ ಆಯುಕ್ತ​

ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿ, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸಾಕ್ಷಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದೇವೆ. ಅವನಿಂದ ಇನ್ನೂ ಕೆಲವರು ನೊಂದಿರುವುದು ಕಂಡುಬಂದಿದೆ. ಆತನ ಬಳಿ ಕೆಲವು ವಿಡಿಯೋಗಳು ಸಹ ಸಿಕ್ಕಿವೆ ಎಂದು ತಿಳಿಸಿದರು.

ಅಪ್ರಾಪ್ತ ಬಾಲಕಿಗೆ ತಂದೆ-ತಾಯಿ ಇರಲಿಲ್ಲ, ಅಜ್ಜಿಯ ಬಳಿ ಇದ್ದಳು. ಆಕೆಗೆ ಹಣ ನೀಡಿ ದುರುಪಯೋಗ ಪಡಿಸಿಕೊಂಡಿದ್ದಾನೆ. ನಮಗೆ ಸಿಕ್ಕ ಸಾಕ್ಷಿ ಆಧಾರದ ಮೇಲೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳುತ್ತೇವೆ. ಮೊಬೈಲ್​ನಲ್ಲಿ ಸಾಕಷ್ಟು ಮಾಹಿತಿ ಸಿಕ್ಕಿವೆ. ಪ್ರಕರಣದಲ್ಲಿ ಇನ್ನು ಹೆಚ್ಚಿನ ನೊಂದವರಿದ್ದಾರೆ. ಈತನ ಮೇಲೆ ಯಾವುದೇ ಹಳೆಯ ಪ್ರಕರಣಗಳಿಲ್ಲ. ನೊಂದಿರುವ ಬಾಲಕಿ 13 ವರ್ಷದವಳಾಗಿದ್ದಾಳೆ. ಹಣದ ಆಮಿಷ ತೋರಿಸಿದ್ದಾನೆ. ಈತನಿಗೆ ಈಗಾಗಲೇ ಮದುವೆ ಸಹ ಆಗಿದೆ. ಇನ್ನು, ಎಷ್ಟು ಜನ ನೊಂದವರಿದ್ದಾರೆ ಅನ್ನೋದು ತನಿಖೆ ನಂತರ ತಿಳಿಯಲಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Sat, 18 January 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ