AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ನಡೆದ ಮತಾಂತರದ ಹಿಂದೆ ಲವ್ ಜಿಹಾದ್​? 12 ಜನರ ವಿರುದ್ಧ ಕೇಸ್ ಬುಕ್

ಹುಬ್ಬಳ್ಳಿಯಲ್ಲಿ ಮತಾಂತರ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಮತಾಂತರದ ಹಿಂದೆ ಲವ್ ಜಿಹಾದ್​ ವಾಸನೆ ಬಂದಿದೆ.

ಹುಬ್ಬಳ್ಳಿಯಲ್ಲಿ ನಡೆದ ಮತಾಂತರದ ಹಿಂದೆ ಲವ್ ಜಿಹಾದ್​? 12 ಜನರ ವಿರುದ್ಧ ಕೇಸ್ ಬುಕ್
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 25, 2022 | 1:45 PM

Share

ಹುಬ್ಬಳ್ಳಿ: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಆದರೂ ಸಹ ಕಾನೂನಿ ಭಯವಿಲ್ಲದೇ ಹುಬ್ಬಳ್ಳಿಯಲ್ಲಿ (Hubballi) ಮತಾಂತರ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೇ ಮತಾಂತರದ ಹಿಂದೆ ಲವ್ ಜಿಹಾದ್ (Love Jihad)​ ವಾಸನೆ ಬಂದಿದೆ.

ಮುಸ್ಲಿಂ ಧರ್ಮಕ್ಕೆ (Hindu Muslim)ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ 12 ಜನರು ವಿರುದ್ಧ ನಿನ್ನೆ(ಸೆ.24) ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೆಹಮಾನ್,ಅಜೀಸಾಬ್,ನಯಾಜ್ ಪಾಷಾ,ನದೀಮ್ ಖಾನ್,ಅನ್ಸಾರ್ ಪಾಷಾ,ಸಯ್ಯದ್ ದಸ್ತಗಿರ್,ಮಹಮ್ಮದ್ ಇಕ್ಬಾಲ್,ರಫೀಕ್,ಶಬ್ಬೀರ್,ಖಾಲಿದ್,ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ಪೊಲೀಸರು ಎಫ್‍ಐಆರ್ (FIR)ದಾಖಲಿಸಿದ್ದಾರೆ.

ಈಗಾಗಲೇ ಇಸ್ಲಾಂ ಧರ್ಮಕ್ಕೆ ಕನ್ವರ್ಟ್ ಆಗಿರುವ ಶ್ರೀಧರ್ ಅಲಿಯಾಸ್ ಸಲ್ಮಾನ್, ಸಾಮಾಜಿಕ ಜಾಲತಾಣದ ಮೂಲಕ‌ ಪರಿಚಯವಾದ ಹುಬ್ಬಳ್ಳಿಯ ಭೈರಿದೇವರಕೊಪ್ಪದ ಹುಡಗಿಯನ್ನ ಸೆ.17 ರಂದು ಭೇಟಿ ಮಾಡಲು‌ ಬಂದಿದ್ದ. ಆ ವೇಳೆ ಅನುಮಾನ ಬಂದು ಶ್ರೀಧರ್ ಅಲಿಯಾಸ್ ಸಲ್ಮಾನ್ ಗೆ ಸ್ಥಳೀಯರು. ಹೊಡೆದಿದ್ದರು. ಇದರಿಂದ ಗಾಯಗೊಂಡಿದ್ದ ಸಲ್ಮಾನ್ ಹಲ್ಲೆ ನಡೆಸಿದ 12 ಜನರ ವಿರುದ್ಧ ​​ ದೂರು ನೀಡಿದ್ದ. ಬಳಿಕ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ಮಾಡುವಾಗ ಸಲ್ಮಾನ ಮತಾಂತರ ಉದ್ದೇಶ ಬಟಾಬಯಲಾಗಿದೆ.

ಪ್ರೀತಿಸಿದ ಹುಡಗಿ ಬಳಿ ಹಣ, ಬಂಗಾರ ವಸೂಲಿ‌ ಮಾಡಿದ್ದಾನೆ. ಅಲ್ಲದೇ ಬ್ಲಾಕ್ ಮೇಲ್ ಮಾಡಿ ಇಸ್ಲಾಂ‌ ಮತಾಂತರಕ್ಕೆ ಕನ್ವರ್ಟ್ ಆಗುವಂತೆ ಒತ್ತಾಯ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮತಾಂತರ ಹಿಂದೆ ಲವ್ ಜಿಹಾದ್ ವಾಸನೆ ಹೌದು…ಮತಾಂತರ ಹಿಂದೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಜಾಲತಾಣದಲ್ಲಿ ಪರಿಚಯವಾಗಿದ್ದ ಹುಬ್ಬಳ್ಳಿ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರೀತಿಸಿದ ಯುವತಿ ಬಳಿ ಹಣ, ಚಿನ್ನಾಭರಣ ಪಡೆದು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವತಿಯನ್ನು ಬ್ಲ್ಯಾಕ್​​ಮೇಲ್ ಮಾಡ್ತಿದ್ದ ಶ್ರೀಧರ್ ಅಲಿಯಾಸ್​ ಸಲ್ಮಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Published On - 1:45 pm, Sun, 25 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ