AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೋ ಪಾಯ್ಸನ್ ಕೊಟ್ಟು ಹುಬ್ಬಳ್ಳಿ ಉದ್ಯಮಿ ಹತ್ಯೆ? ಎರಡನೇ ಪತ್ನಿ ವಿರುದ್ಧ ಮಗ ಆರೋಪ

ನಗರದ ದುರ್ಗದ ಬೈಲ್​ನಲ್ಲಿ ಟೀ‌ ವ್ಯಾಪಾರಸ್ಥರಾಗಿದ್ದ ಅಶೋಕ ಬ್ಯಾಹಟ್ಟಿಯನ್ನು ಸ್ಲೋ ಪಾಯ್ಸನ್ ಕೊಟ್ಟು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಮೂಲಕ ಉದ್ಯಮಿಯ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆಸ್ತಿಗಾಗಿ ಮೇರಿನೇ ಸ್ಲೋ ಪಾಯ್ಸನ್​ ಕೊಟ್ಟು ಹತ್ಯೆ ಮಾಡಿರುವುದಾಗಿ ಅಶೋಕ ಬ್ಯಾಹಟ್ಟಿ ಪುತ್ರ ಆದಿತ್ಯ ಆರೋಪ ಮಾಡಿದ್ದಾರೆ. 

ಸ್ಲೋ ಪಾಯ್ಸನ್ ಕೊಟ್ಟು ಹುಬ್ಬಳ್ಳಿ ಉದ್ಯಮಿ ಹತ್ಯೆ? ಎರಡನೇ ಪತ್ನಿ ವಿರುದ್ಧ ಮಗ ಆರೋಪ
ಮೃತ ಉದ್ಯಮಿ ಅಶೋಕ ಬ್ಯಾಹಟ್ಟಿ
ಶಿವಕುಮಾರ್ ಪತ್ತಾರ್
| Edited By: |

Updated on: Jan 13, 2024 | 6:49 PM

Share

ಹುಬ್ಬಳ್ಳಿ, ಜನವರಿ 13: ನಗರದ ದುರ್ಗದ ಬೈಲ್​ನಲ್ಲಿ ಟೀ‌ ವ್ಯಾಪಾರಸ್ಥರಾಗಿದ್ದ ಅಶೋಕ ಬ್ಯಾಹಟ್ಟಿಯನ್ನು ಸ್ಲೋ ಪಾಯ್ಸನ್ (slow poison) ಕೊಟ್ಟು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಮೂಲಕ ಉದ್ಯಮಿಯ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಶೋಕ ಮದುವೆಯಾಗಿದ್ದರೂ ಮೇರಿ ಎಂಬ ಮಹಿಳೆಯೊಂದಿಗೆ ಎರಡನೇ ವಿವಾಹ ಆಗಿದ್ದ. ಆಸ್ತಿಗಾಗಿ ಮೇರಿನೇ ಸ್ಲೋ ಪಾಯ್ಸನ್​ ಕೊಟ್ಟು ಹತ್ಯೆ ಮಾಡಿರುವುದಾಗಿ ಅಶೋಕ ಬ್ಯಾಹಟ್ಟಿ ಪುತ್ರ ಆದಿತ್ಯ ಆರೋಪ ಮಾಡಿದ್ದಾರೆ.

ಕೋಟ್ಯಾಂತರ ರೂಪಾಯಿ ಒಡೆಯನಾಗಿರುವ ಅಶೋಕ ಬ್ಯಾಹಟ್ಟಿ, ಆಸ್ತಿಗಾಗಿ ಮೇರಿ ನನ್ನ ತಂದೆಯನ್ನು ಸಾಯಿಸಿದ್ದಾರೆ ನಮಗೆ ನ್ಯಾಯ ಬೇಕು ಎಂದು ಅಶೋ‌ಕ ಮಗ ಆದಿತ್ಯ ಹೇಳಿದ್ದಾರೆ. ಇದೀಗ ಅಶೋಕ ಬ್ಯಾಹಟ್ಟಿ ಮೃತದೇಹ ಕೊಡಲು ನಿರಾಕರಿಸಿದ್ದಾರೆ. ಅಶೋಕ ಪರವಾಗಿ ಬಂದ ಸಂಬಂಧಿಕರೊಂದಿಗೆ ಮೇರಿ ಹಾಗೂ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್​ ದಾಖಲು

ಕಳೆದ ಲಾಕ್ ಡೌನ್​ನಲ್ಲಿ ಅಶೋಕ್​ಗೆ ಮೇರಿ ಪರಿಚಯವಾಗಿದೆ. ಅಶೋಕ ನನ್ನು ಕ್ರಿಶ್ಚಿಯನ್​ಗೆ ಕನ್ವರ್ಟ್ ಮಾಡಿದ್ದಾಳೆ. ಮಕ್ಕಳನ್ನು ಕನ್ವರ್ಟ್ ಮಾಡಲು ಯತ್ನಿಸಿದ್ದಾರೆ.

ನಾನು ಯಾವ ಆಸ್ತಿ ಕಬಳಸಿಲ್ಲ: ಅಶೋಕ ಬ್ಯಾಹಟ್ಟಿ ಎರಡನೇ ಪತಿ ಮೇರಿ

ಈ ಕುರಿತಾಗಿ ಮಾತನಾಡಿರುವ ಮೇರಿ, ಕಳೆದ 16 ವರ್ಷಗಳಿಂದ ನಾನು ಅವರ ಜೊತೆ ಇದ್ದೆ. ಅಶೋಕ ನಾನು ಚಹಾಪುಡಿ‌ ವ್ಯಾಪಾರ ಮಾಡುತ್ತಿದ್ದೇವು. ಐದು ವರ್ಷದಿಂದ ನಾನು ಅಶೋಕ ಮದುವೆಯಾಗಿದ್ದೇವೆ. 16 ವರ್ಷದಿಂದ ಜೀವನ‌ ಮಾಡಿದರೆ, ನಾನು ಯಾವ ಆಸ್ತಿ ಕಬಳಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಬೆನ್ನಲ್ಲೇ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಕಿಡ್ನಾಪ್!

ಮಕ್ಕಳು ಇದೀಗ ಆಸ್ತಿಗಾಗಿ ಬಂದಿದ್ದಾರೆ. ಅಶೋಕ್​ಗೆ ಕೊರೊನಾ ಆಗಿತ್ತು, ಆವಾಗ ಮನೆಯವರು ಬಿಟ್ಟಿದ್ದಾರೆ.  ಆದಿತ್ಯ ನಮ್ಮ ಮನೆಯೊಳಗೆ ಬೆಳೆದಿದ್ದಾನೆ. ನಾವು ಯಾರನ್ನೂ ಕನ್ವರ್ಟ್ ಮಾಡಿಲ್ಲ ಎಂದಿದ್ದಾರೆ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ