AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಳಿಮಾವು ಬಳಿ ಕುಡುಕನ ರಂಪಾಟ: ಸಿಗರೇಟ್​ಗಾಗಿ ಕಿರಿಕ್.. ಪೊಲೀಸರ ಮುಂದೆ ಅಸಭ್ಯ ವರ್ತನೆ

ಪೊಲೀಸ್ ಕಾನ್‌ಸ್ಟೇಬಲ್ ಚಂದ್ರೇಗೌಡ ಮತ್ತು ASI ಶಿವಕುಮಾರ್​ಗೆ ವ್ಯಕ್ತಿ ಧಮ್ಕಿ ಹಾಕಿದ್ದಾನೆ. ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಪೊಲೀಸರನ್ನು ತಳ್ಳಿ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಎಎಸ್‌ಐಗೆ ಕಾಲಿನಿಂದ ಒದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿ ಬೀದಿ ರಂಪ ಮಾಡಿದ್ದಾನೆ.

ಹುಳಿಮಾವು ಬಳಿ ಕುಡುಕನ ರಂಪಾಟ: ಸಿಗರೇಟ್​ಗಾಗಿ ಕಿರಿಕ್.. ಪೊಲೀಸರ ಮುಂದೆ ಅಸಭ್ಯ ವರ್ತನೆ
ಕುಡಿದು ಟೈಟ್​ ಆಗಿದ್ದ ನಾಗೇಶ್ ಬೀದಿಯಲ್ಲಿ ರಂಪಾಟ ಮಾಡಿದ್ದಾನೆ.
ಆಯೇಷಾ ಬಾನು
ಆಯೇಷಾ ಬಾನು|

Updated on:Mar 01, 2021 | 10:08 AM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಬೇಕರಿ ಮಾಲೀಕನ ಜೊತೆ ಕುಡುಕನೋರ್ವ ಕಿರಿಕ್ ಮಾಡಿಕೊಂಡಿದ್ದು ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೆಬ್ರವರಿ 26ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕುಡಿದು ಟೈಟ್​ ಆಗಿದ್ದ ನಾಗೇಶ್ ಎಂಬ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಪತ್ನಿಗೆ ಎಚ್ಚರಿಕೆ ನೀಡಿದ್ದಾರೆ.

ಹೊಮ್ಮದೇವನಹಳ್ಳಿ ನಿವಾಸಿ ನಾಗೇಶ್(37) ಫೆಬ್ರವರಿ 26ರ ರಾತ್ರಿ ಕುಡಿದು ಫುಲ್ ಟೈಟ್ ಆಗಿದ್ದ. ಈ ವೇಳೆ ಬಸವನಪುರ ವೃತ್ತದ ಬಳಿಯಿದ್ದ ಬೇಕರಿಗೆ ಬಂದು ಸಿಗರೇಟ್ ವಿಚಾರವಾಗಿ ಬೇಕರಿ ಮಾಲೀಕನ ಜೊತೆ ಜಗಳ ಮಾಡಿಕೊಂಡಿದ್ದ. ಮಾಲೀಕ ಹರೀಶ್ ಮಾಹಿತಿ ಆಧರಿಸಿ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ರು. ವ್ಯಕ್ತಿಯ ವರ್ತನೆ ನೋಡಿ ಆತನನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಬಂಧಿಸಲು ಹೋದ ಪೊಲೀಸರ ಮುಂದೆ ಕುಡುಕ ಗಂಡ ಹಾಗೂ ಹೆಂಡತಿಯ ಹೈಡ್ರಾಮಾ ಶುರುವಾಗಿದೆ.

ಪೊಲೀಸ್ ಕಾನ್‌ಸ್ಟೇಬಲ್ ಚಂದ್ರೇಗೌಡ ಮತ್ತು ASI ಶಿವಕುಮಾರ್​ಗೆ ವ್ಯಕ್ತಿ ಧಮ್ಕಿ ಹಾಕಿದ್ದಾನೆ. ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಪೊಲೀಸರನ್ನು ತಳ್ಳಿ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಎಎಸ್‌ಐಗೆ ಕಾಲಿನಿಂದ ಒದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿ ಬೀದಿ ರಂಪ ಮಾಡಿದ್ದಾನೆ. ಪತ್ನಿಗೆ ಕರೆ ಮಾಡಿ ಮಕ್ಕಳ ಜೊತೆ ಸ್ಥಳಕ್ಕೆ ಬಂದು ಪೊಲೀಸ್ ವಾಹನಕ್ಕೆ ಅಡ್ಡಲಾಗಿ ಮಲಗುವಂತೆ ತಿಳಿಸಿದ್ದಾನೆ. ಪತಿಯ ಮಾತಿನಂತೆ ಸ್ಥಳಕ್ಕೆ ಬಂದ ಮಹಿಳೆ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾಳೆ. ಗಂಡನನ್ನ ಕರೆದೊಯ್ದರೆ, ಪೊಲೀಸರ ವಿರುದ್ಧವೇ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಆರೋಪಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಾಗೂ ಆರೋಪಿ ನಾಗೇಶ್ ಪತ್ನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಡ್ರೈವರ್​ಗೆ ಕುಡುಕರ ಕಿರಿಕ್, ಯುವಕರ ನಶೆ ಇಳಿಸಿದ ಪ್ರಯಾಣಿಕರು

Published On - 8:30 am, Mon, 1 March 21

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ