Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಾಫಿ ವಿಕೃತ ಕಾಮಿ, ಕ್ರೌರ್ಯವೆಸಗಿ ಸಂತೋಷಪಡುತ್ತಿದ್ದ ಮನೋರೋಗಿ

ಪದ್ಮಾ ಅವರನ್ನು ಶಾಫಿ ಕತ್ತು ಹಿಸುಕಿ, ತಲೆ ಕಡಿದು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನುಳಿದ ಅವಶೇಷಗಳನ್ನು ಬಕೆಟ್‌ನಲ್ಲಿ ಇರಿಸಲಾಗಿತ್ತು

ಕೇರಳ: ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಾಫಿ ವಿಕೃತ ಕಾಮಿ, ಕ್ರೌರ್ಯವೆಸಗಿ ಸಂತೋಷಪಡುತ್ತಿದ್ದ ಮನೋರೋಗಿ
ಮುಹಮ್ಮದ್ ಶಾಫಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 12, 2022 | 7:27 PM

ತಿರುವನಂತಪುರಂ: ಕೇರಳದಲ್ಲಿ (Kerala) ನಡೆದ ನರಬಲಿ (human sacrifice) ಪ್ರಕರಣದಲ್ಲಿ ಇಬ್ಬರು ಮಹಿಳೆಯರನ್ನು ಹತ್ಯೆಗೈದು ಮೃತದೇಹವನ್ನು ತುಂಡು ತುಂಡಾಗಿಸಿದ ಪ್ರಮುಖ ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿದೆ. ಈತ ಸಾಮಾಜಿಕ ಜಾಲತಾಣಗಳನ್ನು ಮಹಿಳೆಯರನ್ನು ಪುಸಲಾಯಿಸಿ ಹಂತಕ ದಂಪತಿಗಳ ಮನೆಗೆ ಕರೆತರುತ್ತಿದ್ದ ಎಂದು ಹೇಳಲಾಗಿದ. ಅರ್ಧದಲ್ಲೇ ಶಾಲಾ ಶಿಕ್ಷಣ ಕೈಬಿಟ್ಟಿದ್ದ ಮುಹಮ್ಮದ್ ಶಾಫಿ (52) (Muhammad Shafi)ಇಬ್ಬರು ಮಹಿಳೆಯರನ್ನು ಮಸಾಜ್ ಥೆರಪಿಸ್ಟ್ ದಂಪತಿಗಳಾದ ಭಗವಲ್ ಸಿಂಗ್ ಮತ್ತು ಅವರ ಪತ್ನಿ ಲೈಲಾ ಅವರಿಗೆ ಸರಬರಾಜು ಮಾಡಿದ “ಏಜೆಂಟ್”. 2020ರಲ್ಲಿ 75ರ ಹರೆಯದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಶಾಫಿ ಜಾಮೀನಿನ ಮೇಲೆ ಹೊರಗಿದ್ದ. ಶಾಫಿ, ಈಗ ಹತ್ಯೆಯಾಗಿರುವ ರೋಸ್ಲಿನ್ ಮತ್ತು ಪದ್ಮಾ ಅವರನ್ನು ಫೇಸ್‌ಬುಕ್‌ನಲ್ಲಿ ಕಂಡು ಅವರನ್ನು ಪತ್ತನಂತಿಟ್ಟದಲ್ಲಿರುವ ದಂಪತಿಗಳ ಮನೆಗೆ ಕರೆದುಕೊಂಡುಬಂದಿದ್ದ. ಈ ಹಿಂದೆಯೂ ಇತರ ಮಹಿಳೆಯರೊಂದಿಗೆ ಈ ಕೃತ್ಯ ಎಸಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಶಾಫಿ ಪೋರ್ನ್ ಚಿತ್ರದಲ್ಲಿ ನಟಿಸಲು ಮಹಿಳೆಯರಿಗೆ ಹಣದ ಆಮಿಷವೊಡ್ಡಿದ್ದ ಎನ್ನಲಾಗಿದೆ. ಭಗವಲ್ ಸಿಂಗ್ ಮತ್ತು ಲೈಲಾ ಅವರ ಆರ್ಥಿಕ ತೊಂದರೆಗಳನ್ನು ಕೊನೆಗೊಳಿಸಲು ನರಬಲಿ ನೀಡಬೇಕು ಎಂದು ಸಲಹೆ ನೀಡಿದ್ದು ಕೂಡಾ ಈತನೇ.

ಜೂನ್‌ನಲ್ಲಿ ರೋಸ್ಲಿನ್ ಮತ್ತು ಸೆಪ್ಟೆಂಬರ್‌ನಲ್ಲಿ ಪದ್ಮಾ ನಾಪತ್ತೆಯಾಗಿದ್ದಾರೆ. ಅವರಿಬ್ಬರೂ ಎರ್ನಾಕುಲಂನಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದರು. ಪದ್ಮಾ ಅವರನ್ನು ಶಾಫಿ ಕತ್ತು ಹಿಸುಕಿ, ತಲೆ ಕಡಿದು 56 ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನುಳಿದ ಅವಶೇಷಗಳನ್ನು ಬಕೆಟ್‌ನಲ್ಲಿ ಇರಿಸಲಾಗಿತ್ತು.ರೋಸ್ಲಿನ್ ಅನ್ನು ಲೈಲಾ ಕತ್ತು ಹಿಸುಕಿದ್ದು ಆಕೆಯ ಸ್ತನಗಳನ್ನು ಕತ್ತರಿಸಲಾಯಿತು.

ಇದನ್ನೂ ಓದಿ
Image
ಕೇರಳದ ನರಬಲಿ ಪ್ರಕರಣ: ಯೌವನ ಕಾಪಾಡುವುದಕ್ಕಾಗಿ ಮಹಿಳೆಯರನ್ನು ಕೊಂದು ತಿಂದ ಆರೋಪಿಗಳು
Image
ಕೇರಳದಲ್ಲಿ ಇಬ್ಬರು ಮಹಿಳೆಯರ ಹತ್ಯೆ , ನರಬಲಿ ಶಂಕೆ; ಮೂವರ ಬಂಧನ

ಶಾಫಿ ಮಹಿಳೆಯರ ಮೇಲೆ ಲೈಂಗಿಕ ವಿಕೃತ ಕೃತ್ಯ ಎಸಗಿದ್ದು, ನರಬಲಿ ಮತ್ತು ನರಭಕ್ಷಣೆಗಾಗಿ ಮಹಿಳೆಯರನ್ನು ಗ್ರಾಹಕರಿಗೆ ಪೂರೈಸುತ್ತಿದ್ದರು ಎಂದು ಕೊಚ್ಚಿ ಪೊಲೀಸ್ ಮುಖ್ಯಸ್ಥ ಸಿ.ಎಚ್.ನಾಗರಾಜು ತಿಳಿಸಿದ್ದಾರೆ. ಮಹಿಳೆಯೊಬ್ಬರಿಗೆ ಚಾಕುವಿನಿಂದ ಚಿತ್ರಹಿಂಸೆ ನೀಡಿರುವುದು ತನಿಖೆಯಿಂದ ತಿಳಿದು ಬಂದಿದೆ. ಮಾನವ ಮಾಂಸವನ್ನು ಸೇವಿಸಿದಂತಿದೆ ಎಂದು ನಾಗರಾಜು ಹೇಳಿದರು. ಶಾಫಿ “ಲೈಂಗಿಕ ವಿಕೃತಿಗೆ ವ್ಯಸನಿಯಾಗಿದ್ದ, ಕ್ರೌರ್ಯದಲ್ಲಿ ಸಂತೋಷಪಡುತ್ತಿದ್ದ ಮನೋರೋಗಿಯಾಗಿದ್ದ ಎಂದು ಅವರು ಹೇಳಿದ್ದಾರೆ. ಹೆಚ್ಚು ಆರೋಪಿಗಳು ಇದ್ದಾರೆಯೇ ಮತ್ತು ಅಂತಹ ಹೆಚ್ಚಿನ ಪ್ರಕರಣಗಳು ನಡೆದಿದೆಯೇ ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಪದ್ಮಾ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯರ ಫೋನ್ ವಿವರಗಳು ಶಾಫಿಯತ್ತ ಕರೆದೊಯ್ದಿತು. ಸೆಕ್ಯುರಿಟಿ ಫೂಟೇಜ್ ಮತ್ತು ಆತ ಬಿಟ್ಟು ಹೋಗಿದ್ದ ಸ್ಕಾರ್ಪಿಯೋ ಕಾರಿನ ಸಹಾಯದಿಂದ ಆತನನ್ನು ಪತ್ತೆ ಹಚ್ಚಲಾಯಿತು. ತನಿಖೆಯ ನಂತರ ಪೊಲೀಸರು ಪತ್ತನಂತಿಟ್ಟದ ಮನೆಗೆ ಕರೆದೊಯ್ದರು, ಅಲ್ಲಿ ದಂಪತಿಗಳು ತಪ್ಪೊಪ್ಪಿಕೊಂಡರು.

ವಯಸ್ಸಾದ ಮಹಿಳೆಯ ಮೇಲೆ ಅತ್ಯಾಚಾರ ಮಾಡಲು ಶಾಫಿ ಯತ್ನಿಸಿದ ಆರೋಪವನ್ನು ಸಹ ಪೊಲೀಸ್ ಆಯುಕ್ತರು ಉಲ್ಲೇಖಿಸಿದ್ದಾರೆ. ಆಕೆಯ ಮೇಲೆಯೂ ಈತ ವಿಕೃತ ಕಾಮವೆಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

Published On - 7:24 pm, Wed, 12 October 22

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ