AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳ; ಎರಡನೇ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಓರ್ವ ಪತ್ನಿ, ಇಬ್ಬರು ಮಕ್ಕಳು ಇದ್ದರೂ ಅದನ್ನು ಮರೆಮಾಚಿ, ಮತ್ತೊಬ್ಬಾಕೆಯನ್ನು ಅದ್ದೂರಿ ಮದುವೆ ಮಾಡಿಕೊಂಡಿದ್ದ ಪತಿರಾಯ, ಈಗ ಕ್ಷುಲ್ಲಕ ಕಾರಣ ಎರಡನೇ ಪತ್ನಿಯನ್ನು ಬರ್ಬರವಾಗಿ ಕೊಂದು ನಂತರ ಪೊಲೀಸರಿಗೆ ಶರಣಾದ ಘಟನೆ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. 

ಗಂಡ-ಹೆಂಡತಿ ಜಗಳ; ಎರಡನೇ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ
ಆರೋಪಿ ಗಂಡ, ಮೃತ ಪತ್ನಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 10, 2024 | 7:55 PM

Share

ಚಿಕ್ಕಬಳ್ಳಾಪುರ, ಏ.10: ಚಿಂತಾಮಣಿ(Chintamani) ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಎರಡನೇ ಪತ್ನಿಯನ್ನ ಕೊಲೆ ಮಾಡಿ ಓಡಿ ಹೋಗಿದ್ದ ಆರೋಪಿ ಪತಿ ಹರೀಶ್ ಮೂರು ದಿನಗಳ ಬಳಿಕ ಹೊಸಕೋಟೆ ಪೊಲೀಸರಿಗೆ ಶರಣಾಗಿದ್ದಾನೆ.​ ರೆಡ್ಡಿಲಕ್ಷ್ಮಿ(30) ಮೃತ ರ್ದುದೈವಿ. ಆಂಧ್ರ ಪ್ರದೇಶ ಮೂಲದವರಾಗಿದ್ದ ದಂಪತಿ, ಒಂದು ವರ್ಷದ ಹಿಂದೆ ಸಾರ್ವಜನಿಕರ ಸಮ್ಮೂಖದಲ್ಲಿ ಅದ್ದೂರಿ ವಿವಾಹ ಮಾಡಿಕೊಂಡು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಹರೀಶ್ ಹೋಸಕೋಟೆಯಲ್ಲಿ ಹೂ ವ್ಯಾಪಾರಿಯಾಗಿದ್ರೆ, ರೆಡ್ಡಿಲಕ್ಷ್ಮಿ ಮನೆಯಲ್ಲಿ ಇದ್ದಳು. ಆದ್ರೆ, ಈಗ ಸ್ವತಃ ಹರೀಶ್ ಪತ್ನಿಯನ್ನು ಬರ್ಬರವಾಗಿ ಕೊಂದು ಹೊಸಕೋಟೆ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.

ಇನ್ನು ಹರೀಶ್​ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಮಮತಾ ಎಂಬುವವರ ಜೊತೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇತ್ತ ವಿವಾತೆಯಾಗಿದ್ದ ರೆಡ್ಡಿಲಕ್ಷ್ಮಿ ಪತಿಯಿಂದ ವಿಚ್ಚೇದನ ಪಡೆದು, ಹರೀಶ್​ನನ್ನು ಎರಡನೆ ಮದುವೆಯಾಗಿದ್ದಳು. ಆದ್ರೆ, ಹರೀಶ್​ ಮದುವೆಯಾಗಿರುವ ವಿಚಾರ ತಿಳಿಸಿರಲಿಲ್ಲ. ಇದೆ ವಿಚಾರಕ್ಕೆ ಇಬ್ಬರ ಮದ್ಯೆ ಮನಸ್ತಾಪ ಇತ್ತು. ಈ ಹಿನ್ನಲೆ ಸೋಮವಾರ ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಹರೀಶ್​ ಪತ್ನಿಯ ಕತ್ತು ಹಿಸುಕಿದ್ದಾನೆ. ಬಳಿಕ ಉಸಿರಾಡುತ್ತಿದ್ದ ಪತ್ನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ನಂತರ ಮನೆಗೆ ಬೀಗ ಜಡಿದು ಮೊದಲನೆ ಹೆಂಡತಿ ಇದ್ದ ಹೊಸಕೋಟೆಗೆ ಹೋಗಿದ್ದ.

ಇದನ್ನೂ ಓದಿ:ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಎರಡನೆ ಹೆಂಡತಿ ಕೊಲೆ ಮಾಡಿದ ವಿಷಯ ಮೊದಲನೆ ಪತ್ನಿಗೆ ಇಂದು(ಏ.10) ತಿಳಿಸಿದ ಕಾರಣ, ಪತ್ನಿಯೇ ಆರೋಪಿ ಗಂಡನನ್ನು ಕರೆದುಕೊಂಡು ಹೋಗಿ ಹೋಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾಳೆ. ನಂತರ ವಿಚಾರ ರೆಡ್ಡಿಲಕ್ಷ್ಮಿ ಮನೆಯಲ್ಲಿ ತಿಳಿಸಿದ್ದು, ಹರೀಶ್​ನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಆರೋಪಿ ಹರೀಶ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಎರಡನೆ ಪತ್ನಿ ಇದ್ರೆ ಮೊದಲನೆ ಪತ್ನಿಯ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಕೋಪದಲ್ಲಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ