AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳ; ಎರಡನೇ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಓರ್ವ ಪತ್ನಿ, ಇಬ್ಬರು ಮಕ್ಕಳು ಇದ್ದರೂ ಅದನ್ನು ಮರೆಮಾಚಿ, ಮತ್ತೊಬ್ಬಾಕೆಯನ್ನು ಅದ್ದೂರಿ ಮದುವೆ ಮಾಡಿಕೊಂಡಿದ್ದ ಪತಿರಾಯ, ಈಗ ಕ್ಷುಲ್ಲಕ ಕಾರಣ ಎರಡನೇ ಪತ್ನಿಯನ್ನು ಬರ್ಬರವಾಗಿ ಕೊಂದು ನಂತರ ಪೊಲೀಸರಿಗೆ ಶರಣಾದ ಘಟನೆ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. 

ಗಂಡ-ಹೆಂಡತಿ ಜಗಳ; ಎರಡನೇ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ
ಆರೋಪಿ ಗಂಡ, ಮೃತ ಪತ್ನಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 10, 2024 | 7:55 PM

Share

ಚಿಕ್ಕಬಳ್ಳಾಪುರ, ಏ.10: ಚಿಂತಾಮಣಿ(Chintamani) ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಎರಡನೇ ಪತ್ನಿಯನ್ನ ಕೊಲೆ ಮಾಡಿ ಓಡಿ ಹೋಗಿದ್ದ ಆರೋಪಿ ಪತಿ ಹರೀಶ್ ಮೂರು ದಿನಗಳ ಬಳಿಕ ಹೊಸಕೋಟೆ ಪೊಲೀಸರಿಗೆ ಶರಣಾಗಿದ್ದಾನೆ.​ ರೆಡ್ಡಿಲಕ್ಷ್ಮಿ(30) ಮೃತ ರ್ದುದೈವಿ. ಆಂಧ್ರ ಪ್ರದೇಶ ಮೂಲದವರಾಗಿದ್ದ ದಂಪತಿ, ಒಂದು ವರ್ಷದ ಹಿಂದೆ ಸಾರ್ವಜನಿಕರ ಸಮ್ಮೂಖದಲ್ಲಿ ಅದ್ದೂರಿ ವಿವಾಹ ಮಾಡಿಕೊಂಡು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಹರೀಶ್ ಹೋಸಕೋಟೆಯಲ್ಲಿ ಹೂ ವ್ಯಾಪಾರಿಯಾಗಿದ್ರೆ, ರೆಡ್ಡಿಲಕ್ಷ್ಮಿ ಮನೆಯಲ್ಲಿ ಇದ್ದಳು. ಆದ್ರೆ, ಈಗ ಸ್ವತಃ ಹರೀಶ್ ಪತ್ನಿಯನ್ನು ಬರ್ಬರವಾಗಿ ಕೊಂದು ಹೊಸಕೋಟೆ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.

ಇನ್ನು ಹರೀಶ್​ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಮಮತಾ ಎಂಬುವವರ ಜೊತೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಇತ್ತ ವಿವಾತೆಯಾಗಿದ್ದ ರೆಡ್ಡಿಲಕ್ಷ್ಮಿ ಪತಿಯಿಂದ ವಿಚ್ಚೇದನ ಪಡೆದು, ಹರೀಶ್​ನನ್ನು ಎರಡನೆ ಮದುವೆಯಾಗಿದ್ದಳು. ಆದ್ರೆ, ಹರೀಶ್​ ಮದುವೆಯಾಗಿರುವ ವಿಚಾರ ತಿಳಿಸಿರಲಿಲ್ಲ. ಇದೆ ವಿಚಾರಕ್ಕೆ ಇಬ್ಬರ ಮದ್ಯೆ ಮನಸ್ತಾಪ ಇತ್ತು. ಈ ಹಿನ್ನಲೆ ಸೋಮವಾರ ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ಹೋಗಿ ಹರೀಶ್​ ಪತ್ನಿಯ ಕತ್ತು ಹಿಸುಕಿದ್ದಾನೆ. ಬಳಿಕ ಉಸಿರಾಡುತ್ತಿದ್ದ ಪತ್ನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ನಂತರ ಮನೆಗೆ ಬೀಗ ಜಡಿದು ಮೊದಲನೆ ಹೆಂಡತಿ ಇದ್ದ ಹೊಸಕೋಟೆಗೆ ಹೋಗಿದ್ದ.

ಇದನ್ನೂ ಓದಿ:ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಎರಡನೆ ಹೆಂಡತಿ ಕೊಲೆ ಮಾಡಿದ ವಿಷಯ ಮೊದಲನೆ ಪತ್ನಿಗೆ ಇಂದು(ಏ.10) ತಿಳಿಸಿದ ಕಾರಣ, ಪತ್ನಿಯೇ ಆರೋಪಿ ಗಂಡನನ್ನು ಕರೆದುಕೊಂಡು ಹೋಗಿ ಹೋಸಕೋಟೆ ಪೊಲೀಸರಿಗೆ ಒಪ್ಪಿಸಿದ್ದಾಳೆ. ನಂತರ ವಿಚಾರ ರೆಡ್ಡಿಲಕ್ಷ್ಮಿ ಮನೆಯಲ್ಲಿ ತಿಳಿಸಿದ್ದು, ಹರೀಶ್​ನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಆರೋಪಿ ಹರೀಶ್​ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಎರಡನೆ ಪತ್ನಿ ಇದ್ರೆ ಮೊದಲನೆ ಪತ್ನಿಯ ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಕೋಪದಲ್ಲಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ