Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

ಚಾಕುವಿನಿಂದ ಪತ್ನಿಯ ಪ್ರಿಯಕರನ ಕತ್ತು ಸೀಳಿ ಪತಿ ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

Chikkaballapur: ಪತ್ನಿಯ  ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ
ಆರೋಪಿ ವಿಜಯ
Follow us
ವಿವೇಕ ಬಿರಾದಾರ
|

Updated on:Jun 25, 2023 | 12:21 PM

ಚಿಕ್ಕಬಳ್ಳಾಪುರ: ಚಾಕುವಿನಿಂದ ಪತ್ನಿಯ (Wife) ಪ್ರಿಯಕರನ (Lover) ಕತ್ತು ಸೀಳಿ ಪತಿ (Husband) ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ. ಬಟ್ಲಹಳ್ಳಿ ನಿವಾಸಿ ವಿಜಯ್  ಹಲ್ಲೆ ಮಾಡಿದ ಆರೋಪಿ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ಭೀಭತ್ಸ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಾರೇಶ್ ಚಿಕಿತ್ಸೆ ಪಡೆದು ಮನೆಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ: ವಿಚ್ಛೇದನ ಪಡೆಯಲು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆ

ರಾಯಚೂರು: ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ಪಟ್ಡಣದ ನಿವಾಸಿ ಸುಬ್ರಮಣ್ಯ (35) ಮೃತ ವ್ಯಕ್ತಿ. ಸುಬ್ರಹ್ಮಣ್ಯ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಪಾಳುಬಿದ್ದ ಬಾವಿಯಲ್ಲಿ ಶವವಾಗಿ‌ ಪತ್ತೆಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದೊಂದಿಗೆ ಮೃತದೇಹ ಮೇಲೆತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Sun, 25 June 23

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!