ನೋಡಲು ಚೆನ್ನಾಗಿಲ್ಲವೆಂದು ಪತ್ನಿ ಮೇಲೆ ರಾಡ್​ನಿಂದ ಹಲ್ಲೆ

ಬೆಂಗಳೂರು: ಹೆಂಡತಿ ನೋಡಲು ಚೆನ್ನಾಗಿಲ್ಲವೆಂದು ಆರೋಪಿಸಿ ಪತ್ನಿಯನ್ನೇ ಪತಿ ಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ. ಪತ್ನಿ ವಿಜಯಲಕ್ಷ್ಮೀ ಮೇಲೆ ಪತಿ ರಾಡ್​ನಿಂದ ಹಲ್ಲೆ ನಡೆಸಿದ್ದಾನೆ. 1 ವರ್ಷದ ಹಿಂದೆ ಶಶಿಕುಮಾರ್, ವಿಜಯಲಕ್ಷ್ಮೀ ಮದುವೆಯಾಗಿದ್ದರು. ನಂತರ 6 ತಿಂಗಳವರೆಗೆ ಅನ್ಯೋನ್ಯವಾಗಿ ದಾಪತ್ಯ ಜೀವನ ಸಾಗಿಸಿದ್ದರು. ಆದರೆ 6 ತಿಂಗಳ ನಂತರ ಪತಿ ಶಶಿಕುಮಾರ್ ವರಸೆ ಬದಲಿಸಿದ್ದಾನೆ. ನೀನು ನೋಡಲು ಚೆನ್ನಾಗಿಲ್ಲ, ನಾನು ಬೇರೆ ವಿವಾಹವಾಗ್ಬೇಕು ಎಂದು ಕಿರುಕುಳ ನೀಡಿದ್ದಾನೆ. ನಿರಂತರವಾಗಿ ಹೆಂಡತಿಗೆ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ […]

ನೋಡಲು ಚೆನ್ನಾಗಿಲ್ಲವೆಂದು ಪತ್ನಿ ಮೇಲೆ ರಾಡ್​ನಿಂದ ಹಲ್ಲೆ
ಸಾಧು ಶ್ರೀನಾಥ್​

Updated on: Mar 10, 2020 | 12:38 PM

ಬೆಂಗಳೂರು: ಹೆಂಡತಿ ನೋಡಲು ಚೆನ್ನಾಗಿಲ್ಲವೆಂದು ಆರೋಪಿಸಿ ಪತ್ನಿಯನ್ನೇ ಪತಿ ಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರದ ಮಾರೇನಹಳ್ಳಿಯಲ್ಲಿ ನಡೆದಿದೆ. ಪತ್ನಿ ವಿಜಯಲಕ್ಷ್ಮೀ ಮೇಲೆ ಪತಿ ರಾಡ್​ನಿಂದ ಹಲ್ಲೆ ನಡೆಸಿದ್ದಾನೆ.

1 ವರ್ಷದ ಹಿಂದೆ ಶಶಿಕುಮಾರ್, ವಿಜಯಲಕ್ಷ್ಮೀ ಮದುವೆಯಾಗಿದ್ದರು. ನಂತರ 6 ತಿಂಗಳವರೆಗೆ ಅನ್ಯೋನ್ಯವಾಗಿ ದಾಪತ್ಯ ಜೀವನ ಸಾಗಿಸಿದ್ದರು. ಆದರೆ 6 ತಿಂಗಳ ನಂತರ ಪತಿ ಶಶಿಕುಮಾರ್ ವರಸೆ ಬದಲಿಸಿದ್ದಾನೆ. ನೀನು ನೋಡಲು ಚೆನ್ನಾಗಿಲ್ಲ, ನಾನು ಬೇರೆ ವಿವಾಹವಾಗ್ಬೇಕು ಎಂದು ಕಿರುಕುಳ ನೀಡಿದ್ದಾನೆ.

ನಿರಂತರವಾಗಿ ಹೆಂಡತಿಗೆ ದೈಹಿಕವಾಗಿ, ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆ ವಿಜಯಲಕ್ಷ್ಮೀ ಮನೆಬಿಟ್ಟು ತವರು ಮನೆ ಸೇರಿದ್ದಾಳೆ. ವಿಜಯಲಕ್ಷ್ಮೀ ಪೋಷಕರು ಇಬ್ಬರನ್ನೂ ಕೂರಿಸಿ ಬುದ್ಧಿ ಮಾತು ಹೇಳಿದ್ದಾರೆ. ನಂತರ ಪತಿ ಶಶಿಕುಮಾರ್​ ಜತೆ ವಿಜಯಲಕ್ಷ್ಮೀ ಮನೆಗೆ ಬಂದಿದ್ದಾಳೆ.

ಪತ್ನಿಗೆ ಗೊತ್ತಾಗದಂತೆ ಪತಿ ವಿಚ್ಛೇದನ ಅರ್ಜಿ ಹಾಕಿದ್ದಾನೆ. ವಿಚ್ಛೇದನ ಅರ್ಜಿಗೆ ಸಹಿ ಹಾಕುವಂತೆ ಒತ್ತಾಯಿಸಿದ್ದಾನೆ. ಸಹಿಮಾಡಲು ನಿರಾಕರಿಸಿದ್ದಕ್ಕೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ನೀನು ಸತ್ತರೆ ನಾನು ಬೇರೆ ಮದುವೆಯಾಗುತ್ತೇನೆಂದಿದ್ದಾನೆ. ಸದ್ಯ ಪತಿ ಶಶಿಕುಮಾರ್ ಹಲ್ಲೆಮಾಡಿರುವುದಾಗಿ ಪತ್ನಿ ವಿಜಯಲಕ್ಷ್ಮೀ ಆರೋಪಿಸಿದ್ದು, ಗಾಯಾಳು ವಿಜಯಲಕ್ಷ್ಮೀಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭದ್ರತೆ ನೀಡುವಂತೆ ಹಾಗೂ ಪತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us