AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ತಿಂಗಳ ಮಗು ಮುಂದೆಯೇ ಪತ್ನಿಯ ಕೊಲೆ, ಬಣ್ಣ ಬಯಲಾಗುತ್ತೆ ಅಂತಾ ವೈದ್ಯನೂ ಆತ್ಮಹತ್ಯೆ

ಚಿಕ್ಕಮಗಳೂರು: ಅದೆಷ್ಟು ಸಿಟ್ಟಿತ್ತೋ..? ಅದೆಷ್ಟು ಸೇಡಿತ್ತೋ..? ಅದೆಷ್ಟು ರೋಷ ಉಕ್ಕಿ ಹರಿದಿತ್ತೋ.. ಒಬ್ಬಂಟಿಯಾಗಿದ್ದ ಈಕೆಯನ್ನ ಕೊಂದು ಮುಗಿಸಲಾಗಿತ್ತು. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಈ ಕೇಸ್ ಬೆನ್ನತ್ತಿದ ಖಾಕಿಗೆ ಈಗ ಸಿಕ್ಕಿದ್ದು ಬೆಚ್ಚಿ ಬೀಳೋ ಸಂಗತಿ. ನಿಜ.. ಇದೊಂದು ದುರಂತ ಕಥೆ. ಗಂಡನೇ ನನ್ನ ಜೀವ. ಗಂಡನೇ ಸರ್ವಸ್ವ ಅಂತಾ ನಂಬಿದ್ದಳು ಈ ಸುಂದರಿ. ಆದ್ರೆ, ಆ ನಂಬಿಕೆಗೆ ದ್ರೋಹ ಬಗೆದಿದ್ದು ಬೇರೆ ಯಾರೂ ಅಲ್ಲ ಜೀವಕ್ಕೆ ಜೀವ ಅಂತಿದ್ದ ಈ ಕ್ರೂರಿಯೇ. ಈಕೆಯ ಪ್ರೀತಿಯ ಅರಮನೆಯನ್ನ […]

6 ತಿಂಗಳ ಮಗು ಮುಂದೆಯೇ ಪತ್ನಿಯ ಕೊಲೆ, ಬಣ್ಣ ಬಯಲಾಗುತ್ತೆ ಅಂತಾ ವೈದ್ಯನೂ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 23, 2020 | 11:34 AM

Share

ಚಿಕ್ಕಮಗಳೂರು: ಅದೆಷ್ಟು ಸಿಟ್ಟಿತ್ತೋ..? ಅದೆಷ್ಟು ಸೇಡಿತ್ತೋ..? ಅದೆಷ್ಟು ರೋಷ ಉಕ್ಕಿ ಹರಿದಿತ್ತೋ.. ಒಬ್ಬಂಟಿಯಾಗಿದ್ದ ಈಕೆಯನ್ನ ಕೊಂದು ಮುಗಿಸಲಾಗಿತ್ತು. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಈ ಕೇಸ್ ಬೆನ್ನತ್ತಿದ ಖಾಕಿಗೆ ಈಗ ಸಿಕ್ಕಿದ್ದು ಬೆಚ್ಚಿ ಬೀಳೋ ಸಂಗತಿ.

ನಿಜ.. ಇದೊಂದು ದುರಂತ ಕಥೆ. ಗಂಡನೇ ನನ್ನ ಜೀವ. ಗಂಡನೇ ಸರ್ವಸ್ವ ಅಂತಾ ನಂಬಿದ್ದಳು ಈ ಸುಂದರಿ. ಆದ್ರೆ, ಆ ನಂಬಿಕೆಗೆ ದ್ರೋಹ ಬಗೆದಿದ್ದು ಬೇರೆ ಯಾರೂ ಅಲ್ಲ ಜೀವಕ್ಕೆ ಜೀವ ಅಂತಿದ್ದ ಈ ಕ್ರೂರಿಯೇ. ಈಕೆಯ ಪ್ರೀತಿಯ ಅರಮನೆಯನ್ನ ಛಿದ್ರ ಛಿದ್ರ ಮಾಡಿದ್ದ. ತನ್ನ ಅರಗಿಣಿಯನ್ನೇ ಕೊಂದು ನಾಟಕವಾಡಿದ್ದ.

6 ತಿಂಗಳ ಮಗು ಮುಂದೆಯೇ ಗೃಹಿಣಿ ಮರ್ಡರ್! ಆವತ್ತು ಫೆಬ್ರವರಿ 17 ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಬಾಣಂತಿಯನ್ನ ಕತ್ತುಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅದೂ ಆರು ತಿಂಗಳ ಪುಟ್ಟ ಕಂದನ ಎದುರೇ ದಂತ ವೈದ್ಯನ ಪತ್ನಿ ಕವಿತಾಳನ್ನು ಮರ್ಡರ್ ಮಾಡಲಾಗಿತ್ತು. ಯಾರೋ ದರೋಡೆಕೋರರು ಚಿನ್ನಾಭರಣ ದೋಚಿ, ಕೊಲೆಗೈದಿದ್ದಾರೆ ಅಂತಾ ಇಡೀ ಊರಿಗೂರೇ ಬೆಚ್ಚಿ ಬಿದ್ದಿತ್ತು.

ವಿಪರ್ಯಾಸ ಅಂದ್ರೆ ಆ ದಿನ ಈಕೆಯ ಪತಿ ರೇವಂತ್ ಕೂಡ ಕಣ್ಣೀರಿಟ್ಟಿದ್ದ. ಅಸಲಿಗೆ ಈ ಕೊಲೆ ಮಾಡಿದ್ದು ದರೋಡೆಕೋರರು ಅಲ್ಲ. ಖದೀಮರು ಅಲ್ಲ. ಈಕೆಗೆ ತಾಳಿ ಕಟ್ಟಿದ ಗಂಡ ರೇವಂತ್​ನೇ ಕತ್ತು ಸೀಳಿ ಡ್ರಾಮಾ ಮಾಡಿದ್ದ.

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ! ಈ ಪ್ರಕರಣದ ಬೆನ್ನು ಬಿದ್ದಿದ್ದ ಕಡೂರು ಪೊಲೀಸ್ರಿಗೆ ಬೆಚ್ಚಿ ಬೀಳೋ ಸಂಗತಿ ಗೊತ್ತಾಗಿದೆ. ಅಸಲಿಗೆ ಈ ಡಾಕ್ಟರ್, ಕಡೂರಿನ ಮಹಿಳೆಯೊಬ್ಬಳ ಜೊತೆ ಅಕ್ರಮ ಸಂಬಂಧವನ್ನ ಹೊಂದಿದ್ನಂತೆ. ಅನೇಕ ಬಾರಿ ಕವಿತಾ ಬುದ್ಧಿವಾದ ಹೇಳಿದ್ಳು. ಆದ್ರೂ ಈತ ಕಳ್ಳಾಟ ಬಿಟ್ಟಿರಲಿಲ್ಲ.

ಯಾವಾಗ ಕವಿತಾ ತೀವ್ರವಾಗಿ ಆಕ್ಷೇಪ ಎತ್ತಿದ್ಲೋ ಅಲ್ಲಿಗೆ ಕೊಲೆಗೆ ಸ್ಕೆಚ್ ಹಾಕಿದ್ದ. ಅದ್ರಂತೆ ಫೆಬ್ರವರಿ 17ರಂದು ಪತ್ನಿಯನ್ನ ಕೊಲೆ ಮಾಡಿದ್ದ ಡಾ.ರೇವಂತ್, ಪೊಲೀಸರ ದಿಕ್ಕುತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದ್ದ. ಮನೆಯಲ್ಲಿದ್ದ ಚಿನ್ನಾಭರಣ ತಾನೇ ಕದ್ದಿಟ್ಟು, ಕೊಲೆಗಡುಕರು ಚಿನ್ನಾಭರಣ ದೋಚಿದ್ದಾರೆ ಅಂತಾ ದೂರು ನೀಡಿದ್ದ. ಆದ್ರೆ, ಕವಿತಾಳ ಮರಣೋತ್ತರ ವರದಿ ದಂತ ವೈದ್ಯನ ಅಸಲಿ ಮುಖವನ್ನ ಬಯಲು ಮಾಡಿತ್ತು.

ಕವಿತಾಳನ್ನು ಕೊಲೆಮಾಡುವ ಮುನ್ನ ಆಕೆಗೆ ಇಂಜೆಕ್ಷನ್ ನೀಡಿದ್ದ. ಪ್ರಜ್ಞೆ ತಪ್ಪಿದ ಬಳಿಕ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದು ಮರಣೋತ್ತರ ವರದಿಯಲ್ಲಿ ಬಯಲಾಗಿತ್ತು. ಈ ಎಲ್ಲಾ ಸೀಕ್ರೆಟ್ ಬಯಲಾಗುತ್ತಿದ್ದಂತೆ, ಈ ಪಾಪಿ ತಾನೂ ಆತ್ಮಹತ್ಯೆ ಮಾಡ್ಕೊಂಡಿದ್ದಾನೆ. ಕಡೂರು ಪಟ್ಟಣದ ಮಸಾಲ ಡಾಬಾದ ಸಮೀಪ ಕಾರು ನಿಲ್ಲಿಸಿ ರೈಲಿಗೆ ಸಿಲುಕಿ ಸೂಸೈಡ್ ಮಾಡಿಕೊಂಡಿದ್ದಾನೆ.

ಒಟ್ನಲ್ಲಿ, ಕಾಮದ ಬಲೆಯಲ್ಲಿ ಬಿದ್ದ ನೀಚ, ತನ್ನ ಪತ್ನಿಯನ್ನೇ ಕ್ರೂರವಾಗಿ ಕೊಂದು ಮುಗಿಸಿದ್ದಾನೆ. ಬಳಿಕ ಮಾನ, ಮರ್ಯಾದೆಗೆ ಹೆದರಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆ ಮಾನ ಮರ್ಯಾದೆ ಬಗ್ಗೆ ಮೊದಲೇ ಅರಿವಿದ್ದಿದ್ರೆ ಪತ್ನಿ ದುರಂತ ಅಂತ್ಯ ಕಾಣ್ತಿರಲಿಲ್ಲ. 6 ತಿಂಗಳ ಮಗು ಸೇರಿ ಇಬ್ಬರು ಮಕ್ಕಳು ಬೀದಿ ಪಾಲಾಗ್ತಿರಲಿಲ್ಲ.

Published On - 11:32 am, Sun, 23 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ