ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ […]

ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ
ಸಾಧು ಶ್ರೀನಾಥ್​

Updated on: Dec 04, 2019 | 4:40 PM

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ ಮಂಡಿಸಿದ್ದರು.

Published On - 4:37 pm, Wed, 4 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us