ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. […]

ನಾದಿನಿಯನ್ನು ಕೊಂದು ಶವವನ್ನು ಪೊದೆಗೆ ಎಸೆದಿದ್ದ ಭಾವ: ಎಲ್ಲಿ? ಯಾಕೆ?
ಸಾಧು ಶ್ರೀನಾಥ್​ Edited By:

Updated on: Jun 26, 2020 | 2:43 PM

ನೆಲಮಂಗಲ: ಸ್ವಂತ ಭಾವನಿಂದಲೇ ನಾದಿನಿಯ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ 15ದಿನಗಳ ಹಿಂದೆ ಶಿರಾ ತಾಲೂಕಿನ ಬಿಜ್ಜನಬೆಳ್ಳ ಮೂಲದ ದೀಪಾ(27) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಗುಂಡೇನಹಳ್ಳಿ ಕೆರೆಯ ಬಳಿ ಪೋದೆಯಲ್ಲಿ ಇಂದು ಮೃತದೇಹ ಪತ್ತೆಯಾಗಿದೆ.

ಬೆಂಗಳೂರಿನ ಅಂದ್ರಹಳ್ಳಿಯಿಂದ ಜೂನ್​ 10ರಂದು ತನ್ನ ಬೈಕ್​ ಜೊತೆ ದೀಪಾ ನಿಗೂಢವಾಗಿ ಕಾಣೆಯಾಗಿದ್ದರು. ದೀಪಾಗೆ ಜೂನ್ 14, 15ರಂದು ಮದುವೆ ನಿಗದಿಯಾಗಿತ್ತು. ಮೃತ ದೀಪಾ ಅಕ್ಕನ ಗಂಡ ಗಿರೀಶ್(30) ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಸದ್ಯ ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, CPIಶಿವಣ್ಣ ನೇತೃತ್ವದಲ್ಲಿ ತನಿಖಾ ಕಾರ್ಯ ಆರಂಭವಾಗಿದೆ. ಕೊಲೆ ಆರೋಪಿ ಗಿರೀಶ್​ ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 1:23 pm, Fri, 26 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us