AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಗಂಡನಿಂದ ಹೆಂಡ್ತಿ ಕೊಲೆ, ಇಬ್ಬರು ಮಕ್ಕಳು ತಬ್ಬಲಿ

ಶಿವಮೊಗ್ಗ: ಹಣಕ್ಕಾಗಿ ತನ್ನ ಪತ್ನಿಯನ್ನೆ ಗಂಡ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪದ ಹೊಸೂರು ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸಾವೇ ಮೃತ ಗೃಹಿಣಿ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಮೂಲದ ಶಿಲ್ಪಾಳನ್ನು ರಘು ಜೊತೆ ಮದುವೆ ಮಾಡಲಾಗಿತ್ತು. ದಂಪತಿಗೆ ಮೂರು ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಮಗಳು ಇದ್ದಾಳೆ. ಆದ್ರೆ ಗಂಡ ಹಾಗೂ ಗಂಡನ ಮನೆಯವ್ರು ದುಡ್ಡಿಗಾಗಿ ಶಿಲ್ಪಾಳಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದ್ರ ನಡುವೆ ನಿನ್ನೆ ರಾತ್ರಿ […]

ಹಣಕ್ಕಾಗಿ ಗಂಡನಿಂದ ಹೆಂಡ್ತಿ ಕೊಲೆ, ಇಬ್ಬರು ಮಕ್ಕಳು ತಬ್ಬಲಿ
ಸಾಧು ಶ್ರೀನಾಥ್​
|

Updated on:Nov 17, 2019 | 10:00 PM

Share

ಶಿವಮೊಗ್ಗ: ಹಣಕ್ಕಾಗಿ ತನ್ನ ಪತ್ನಿಯನ್ನೆ ಗಂಡ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪದ ಹೊಸೂರು ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸಾವೇ ಮೃತ ಗೃಹಿಣಿ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಮೂಲದ ಶಿಲ್ಪಾಳನ್ನು ರಘು ಜೊತೆ ಮದುವೆ ಮಾಡಲಾಗಿತ್ತು. ದಂಪತಿಗೆ ಮೂರು ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಮಗಳು ಇದ್ದಾಳೆ.

ಆದ್ರೆ ಗಂಡ ಹಾಗೂ ಗಂಡನ ಮನೆಯವ್ರು ದುಡ್ಡಿಗಾಗಿ ಶಿಲ್ಪಾಳಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದ್ರ ನಡುವೆ ನಿನ್ನೆ ರಾತ್ರಿ ಶಿಲ್ಪಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಡನ ಮನೆಯವ್ರೇ ಕೊಲೆ ಮಾಡಿದ್ದಾರೆಂದು ಶಿಲ್ಪಾಳ ಪೋಷಕರು ಆರೋಪಿಸಿದ್ದಾರೆ.

ಶಿಲ್ಪಾ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮನೆಯಲ್ಲಿ ಮಕ್ಕಳು ಇಲ್ಲದಿದಾಗ ದುರಂತ ನಡೆದಿದ್ದು, ಮೃತದೇಹವನ್ನ ಕುಣಿಕೆಯಿಂದ ಕೆಳಗಿಳಿಸಿ ಬೆಡ್ ಮೇಲೆ ಮಲಗಿಸಲಾಗಿತ್ತು. ಹೀಗಾಗಿ ಇದು ಕೊಲೆಯೇ ಅಂತಾ ಶಿಲ್ಪಾ ಪೋಷಕರು ಕುಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನು ಶಿಲ್ಪಾ ಸಾವಿನ ಬಳಿಕ ಗಂಡನ ಮನೆಯವ್ರು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸ್ರು ತನಿಖೆ ನಡೆಸ್ತಿದ್ದಾರೆ.

Published On - 9:30 pm, Sun, 17 November 19

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ