AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

ಸೇಡಂ ತಾಲೂಕಿನ ಬಟಗೇರಾ(ಬಿ) ಗ್ರಾಮದ ನಿವಾಸಿ ಶೇಖಪ್ಪ ನಿತ್ಯ ಕಂಠ ಪೂರ್ತಿ ಕುಡಿದು ಬಂದು ಪತ್ನಿ ಮತ್ತು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದನು. ಪತಿಯ ಕಾಟ ತಾಳಲಾರದೆ ಪತ್ನಿ ಬೇರೆ ಮನೆ ಮಾಡಿಕೊಂಡು ಇದ್ದಳು. ಆದರೆ, ಸಂಬಂಧಿಕರ ಸಂಧಾನದಿಂದ ದಂಪತಿ ಒಂದಾಗಿದ್ದರು. ಆದರೆ, ಈಗ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.

ಕಲಬುರಗಿ: ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ
ಆರೋಪಿ ಶೇಖಪ್ಪ, ಕೊಲೆಯಾದ ನಾಗಮ್ಮ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Sep 30, 2024 | 8:01 AM

Share

ಕಲಬುರಗಿ, ಸೆಪ್ಟೆಂಬರ್​ 30: ಸರಸಕ್ಕೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೇಡಂ (Sedam) ತಾಲೂಕಿನ ಬಟಗೇರಾ(ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಕೊಲೆಯಾದ ಮಹಿಳೆ. ಶೇಖಪ್ಪ ಕೊಲೆ ಮಾಡಿದ ಆರೋಪಿ.

ನಾಗಮ್ಮಳ ಪತಿ ಶೇಖಪ್ಪ ಬೇರೆಯವರ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದನು. ಆದರೆ, ಪ್ರತಿನಿತ್ಯ ಕಂಠಪೂರ್ತಿ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ಕೊಡುತ್ತಿದ್ದನು. ಆರೋಪಿ ಶೇಖಪ್ಪಗೆ ಇಬ್ಬರು ಪತ್ನಿಯರಿದ್ದು, ಪತಿಯ ಕಿರುಕುಳ ತಾಳಲಾರದೆ ಎರಡನೇ ಪತ್ನಿ ತವರು ಸೇರಿದ್ದಳು. ಇತ್ತ ನಾಗಮ್ಮಳ ನಡುವಳಿಕೆ ಬಗ್ಗೆ ಶೇಖಪ್ಪ ಅನುಮಾನ ಹೊಂದಿದ್ದನು. ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶೇಖಪ್ಪ ಆರೋಪ ಮಾಡುತ್ತಿದ್ದನಂತೆ.

ಇದರಿಂದ ಬೇಸತ್ತಿದ್ದ ನಾಗಮ್ಮ ಕೆಲದಿನಗಳ ಹಿಂದಷ್ಟೆ ಊರಾಚೆ ಮನೆ ಮಾಡಿ ಮಕ್ಕಳ ಜೊತೆ ವಾಸವಾಗಿದ್ದಳು. ಶನಿವಾರ (ಸೆ.28) ರಂದು ಸಂಬಂಧಿಕರು ಸಂಧಾನ ಮಾಡಿ, ನಾಗಮ್ಮಳನ್ನು ಪತಿ ಶೇಖಪ್ಪನ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಮಹಾಲಕ್ಷ್ಮಿ ಭೀಕರ ಹತ್ಯೆ: ಕೊಲೆ ನಂತರ ಹಂತಕನಿಗೆ ಕಾಡಿತ್ತಾ ಪಾಪ ಪ್ರಜ್ಞೆ?

ಅದೇ ದಿನ ರಾತ್ರಿ ಕಂಠಪೂರ್ತಿ ಕುಡಿದ ಬಂದ ಶೇಖಪ್ಪ, ಪತ್ನಿ ನಾಗಮ್ಮಳಿಗೆ ಸರಸಕ್ಕೆ ಕರೆದಿದ್ದಾನೆ. ಆದರೆ ಪತ್ನಿ ನಾಗಮ್ಮ ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಶೇಖಪ್ಪ, ನಿನ್ನನ್ನು ಕೊಚ್ಚಿ ಹಾಕುತ್ತೇನೆ ಅಂತ ಧಮ್ಕಿ ಹಾಕಿದ್ದಾನೆ. ಏನ್ ಮಾಡ್ತಿಯಾ ಮಾಡು ಅಂತ ನಾಗಮ್ಮ ಹೇಳುತ್ತಿದ್ದಂತೆ, ಹಗ್ಗದಿಂದ ನಾಗಮ್ಮಳನ್ನು ಉಸಿರುಗಟ್ಟಿಸಿ, ಬಳಿಕ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಸೇಡಂ ಪೊಲೀಸ್ ಠಾಣೆಗೆ ಹೋಗಿ ನಾನು ಪತ್ನಿಯನ್ನು ಕೊಲೆ ಮಾಡಿದ್ದೇನೆ ಅಂತ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಸೇಡಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶರಣಾಗಿರುವ ಶೇಖಪ್ಪನನ್ನು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್