AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ. ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ […]

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!
ಸಾಧು ಶ್ರೀನಾಥ್​
| Edited By: |

Updated on: Jul 01, 2020 | 11:51 AM

Share

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ.

ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ ನೋಡ್ತಿದ್ದಂತೆ ಮಹಿಳೆಯೊಬ್ಬಳು ಬೀದಿಗೆ ಓಡೋಡಿ ಬಂದಿದ್ಳು. ಆಕೆಯನ್ನ ವ್ಯಕ್ತಿಯೊಬ್ಬ ಅಟ್ಟಾಡಿಸಿಕೊಂಡು ಬಂದವನೇ ಏಕಾಏಕಿ ಚಾಕುವಿನಿಂದ ಅಟ್ಯಾಕ್ ಮಾಡೇಬಿಟ್ಟಿದ್ದ.

ಚಾಕು ಇರಿದು ತಲೆ ಮೇಲೆ ಕಲ್ಲು ಹಾಕಿದ ಕ್ರೂರಿ! ಹೌದು ಅಷ್ಟಕ್ಕೂ ಕೊಲೆಯಾಗಿರೋ ಈಕೆ ಹೆಸ್ರು ಹೇಮ. ಇನ್ನು ಈತ ಮೃತ ಹೇಮಾಳ ಪತಿ ಮಂಜುನಾಥ್. ಇಬ್ಬರೂ ಹಲವು ವರ್ಷಗಳಿಂದ ನೆಮ್ಮದಿಯಾಗಿ ಜೀವನ ಸಾಗಿಸ್ತಿದ್ರು. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ಮಂಜುನಾಥ್ ಮನೆಗೆ ಸರಿಯಾಗಿ ಬರ್ತಿರಲಿಲ್ಲವಂತೆ. ಜೊತೆಗೆ ಇತ್ತ ಹೇಮಾ ಕೂಡ ಮತ್ತೊಬ್ಬನ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗ್ತಿದೆ. ಅದೇ ರೀತಿ ಪತಿಯೂ ಕೂಡ ಬೇರೊಬ್ಬಳ ಜತೆ ಸಂಬಂಧ ಇರಿಸಿಕೊಂಡಿದ್ದನಂತೆ.

ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ಕೂಡ ನಡೀತಿತ್ತು. ಆದ್ರೆ ನಿನ್ನೆ ರಾತ್ರಿ ಗಲಾಟೆ ತಾರಕಕ್ಕೇರಿದ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿಬಿಟ್ಟಿದ್ದಾನೆ. ಚಾಕುವಿನಿಂದ ಇರಿದಿದ್ದಲ್ಲದೇ ತಲೆ ಮೇಲೆ ಕಲ್ಲು ಕೂಡ ಎತ್ತಿಹಾಕಿ ಎಸ್ಕೇಪ್ ಆಗಿದ್ದಾನೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರಾಜಗೋಪಾಲನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರೋ ಕೊಲೆಗಾರ ಪತಿ ಮಂಜುನಾಥ್‌ಗಾಗಿ ಬಲೆ ಬೀಲಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ