AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ. ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ […]

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!
ಸಾಧು ಶ್ರೀನಾಥ್​
| Edited By: |

Updated on: Jul 01, 2020 | 11:51 AM

Share

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ.

ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ ನೋಡ್ತಿದ್ದಂತೆ ಮಹಿಳೆಯೊಬ್ಬಳು ಬೀದಿಗೆ ಓಡೋಡಿ ಬಂದಿದ್ಳು. ಆಕೆಯನ್ನ ವ್ಯಕ್ತಿಯೊಬ್ಬ ಅಟ್ಟಾಡಿಸಿಕೊಂಡು ಬಂದವನೇ ಏಕಾಏಕಿ ಚಾಕುವಿನಿಂದ ಅಟ್ಯಾಕ್ ಮಾಡೇಬಿಟ್ಟಿದ್ದ.

ಚಾಕು ಇರಿದು ತಲೆ ಮೇಲೆ ಕಲ್ಲು ಹಾಕಿದ ಕ್ರೂರಿ! ಹೌದು ಅಷ್ಟಕ್ಕೂ ಕೊಲೆಯಾಗಿರೋ ಈಕೆ ಹೆಸ್ರು ಹೇಮ. ಇನ್ನು ಈತ ಮೃತ ಹೇಮಾಳ ಪತಿ ಮಂಜುನಾಥ್. ಇಬ್ಬರೂ ಹಲವು ವರ್ಷಗಳಿಂದ ನೆಮ್ಮದಿಯಾಗಿ ಜೀವನ ಸಾಗಿಸ್ತಿದ್ರು. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ಮಂಜುನಾಥ್ ಮನೆಗೆ ಸರಿಯಾಗಿ ಬರ್ತಿರಲಿಲ್ಲವಂತೆ. ಜೊತೆಗೆ ಇತ್ತ ಹೇಮಾ ಕೂಡ ಮತ್ತೊಬ್ಬನ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗ್ತಿದೆ. ಅದೇ ರೀತಿ ಪತಿಯೂ ಕೂಡ ಬೇರೊಬ್ಬಳ ಜತೆ ಸಂಬಂಧ ಇರಿಸಿಕೊಂಡಿದ್ದನಂತೆ.

ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ಕೂಡ ನಡೀತಿತ್ತು. ಆದ್ರೆ ನಿನ್ನೆ ರಾತ್ರಿ ಗಲಾಟೆ ತಾರಕಕ್ಕೇರಿದ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿಬಿಟ್ಟಿದ್ದಾನೆ. ಚಾಕುವಿನಿಂದ ಇರಿದಿದ್ದಲ್ಲದೇ ತಲೆ ಮೇಲೆ ಕಲ್ಲು ಕೂಡ ಎತ್ತಿಹಾಕಿ ಎಸ್ಕೇಪ್ ಆಗಿದ್ದಾನೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರಾಜಗೋಪಾಲನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರೋ ಕೊಲೆಗಾರ ಪತಿ ಮಂಜುನಾಥ್‌ಗಾಗಿ ಬಲೆ ಬೀಲಿಸಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ