AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ. ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ […]

ಅನೈತಿಕ ಸಂಬಂಧ ಆರೋಪ: ಪತ್ನಿಯನ್ನ ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದ ಪತಿ!
ಸಾಧು ಶ್ರೀನಾಥ್​
| Edited By: |

Updated on: Jul 01, 2020 | 11:51 AM

Share

ಬೆಂಗಳೂರು: ಅದೊಂದು ಪುಟ್ಟ ಮನೆ.. ಸುಖೀ ಸಂಸಾರ.. ಗಂಡ, ಹೆಂಡತಿ, ಮಕ್ಕಳು.. ಕಷ್ಟ ಅನ್ನೋದು ಇದ್ರೂ ಸಹ ಇಬ್ಬರೂ ದುಡಿದು ಜೀವನ ಮಾಡ್ತಿದ್ರು. ಆದ್ರೆ ಅದೊಂದು ಸಣ್ಣ ಕಾರಣಕ್ಕೆ ಜಗಳ ಶುರುವಾಗಿತ್ತು. ಆದ್ರೆ ಆಮೇಲೆ ಆಗಿದ್ದೇ ಘನಘೋರ ಘಟನೆ.

ಅದು ಕಳೆದ ರಾತ್ರಿ ಸುಮಾರು 9 ಗಂಟೆ 30 ನಿಮಿಷ ಸಮಯ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರೋ ಲವಕುಶ ನಗರದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ರು. ಮನೆಯೊಳಗೆ ನಡೀತಿದ್ದ ಜಗಳ ಕ್ಷಣಕ್ಷಣಕ್ಕೂ ಜೋರಾಗ್ತಿತ್ತು. ಅಷ್ಟೇ ನೋಡ ನೋಡ್ತಿದ್ದಂತೆ ಮಹಿಳೆಯೊಬ್ಬಳು ಬೀದಿಗೆ ಓಡೋಡಿ ಬಂದಿದ್ಳು. ಆಕೆಯನ್ನ ವ್ಯಕ್ತಿಯೊಬ್ಬ ಅಟ್ಟಾಡಿಸಿಕೊಂಡು ಬಂದವನೇ ಏಕಾಏಕಿ ಚಾಕುವಿನಿಂದ ಅಟ್ಯಾಕ್ ಮಾಡೇಬಿಟ್ಟಿದ್ದ.

ಚಾಕು ಇರಿದು ತಲೆ ಮೇಲೆ ಕಲ್ಲು ಹಾಕಿದ ಕ್ರೂರಿ! ಹೌದು ಅಷ್ಟಕ್ಕೂ ಕೊಲೆಯಾಗಿರೋ ಈಕೆ ಹೆಸ್ರು ಹೇಮ. ಇನ್ನು ಈತ ಮೃತ ಹೇಮಾಳ ಪತಿ ಮಂಜುನಾಥ್. ಇಬ್ಬರೂ ಹಲವು ವರ್ಷಗಳಿಂದ ನೆಮ್ಮದಿಯಾಗಿ ಜೀವನ ಸಾಗಿಸ್ತಿದ್ರು. ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದ ಮಂಜುನಾಥ್ ಮನೆಗೆ ಸರಿಯಾಗಿ ಬರ್ತಿರಲಿಲ್ಲವಂತೆ. ಜೊತೆಗೆ ಇತ್ತ ಹೇಮಾ ಕೂಡ ಮತ್ತೊಬ್ಬನ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗ್ತಿದೆ. ಅದೇ ರೀತಿ ಪತಿಯೂ ಕೂಡ ಬೇರೊಬ್ಬಳ ಜತೆ ಸಂಬಂಧ ಇರಿಸಿಕೊಂಡಿದ್ದನಂತೆ.

ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ಕೂಡ ನಡೀತಿತ್ತು. ಆದ್ರೆ ನಿನ್ನೆ ರಾತ್ರಿ ಗಲಾಟೆ ತಾರಕಕ್ಕೇರಿದ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿಬಿಟ್ಟಿದ್ದಾನೆ. ಚಾಕುವಿನಿಂದ ಇರಿದಿದ್ದಲ್ಲದೇ ತಲೆ ಮೇಲೆ ಕಲ್ಲು ಕೂಡ ಎತ್ತಿಹಾಕಿ ಎಸ್ಕೇಪ್ ಆಗಿದ್ದಾನೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರಾಜಗೋಪಾಲನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರೋ ಕೊಲೆಗಾರ ಪತಿ ಮಂಜುನಾಥ್‌ಗಾಗಿ ಬಲೆ ಬೀಲಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್