AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ. ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ದುಡ್ಡು […]

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!
ಸಾಧು ಶ್ರೀನಾಥ್​
|

Updated on: May 05, 2020 | 4:53 PM

Share

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ.

ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ.

ದುಡ್ಡು ಇಲ್ಲ ಅಂತೇಳಿ ನಡೆದುಕೊಂಡು ಶಾರದ ಮನೆಯತ್ತ ಹೊರಟಿದ್ಲು. ಹಣ ಕೊಡದ ಸಿಟ್ಟಿನಲ್ಲಿ ಹಿಂದಿನಿಂದ ತನ್ನ ಬೈಕನ್ನು ಸ್ಪೀಡಾಗಿ ಓಡಿಸಿ ಹೆಂಡತಿಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಡಿಕ್ಕಿಯಾಗಿ ನೆಲಕ್ಕೆ ಉರುಳಿ ಬಿದ್ದಿದ್ರೂ ಪತ್ನಿ ಕಡೆ ತಿರುಗಿಯೂ ನೋಡದೆ ಪತಿ ಮನೆ ಕಡೆ ಹೊರಟಿದ್ದ.

ಮಹಿಳೆಯ ಸ್ಥಿತಿಯನ್ನು ಕಂಡು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ. ಆರೋಪಿ ಚಂದಪ್ಪ ಚೌಹಾಣ್​ಗೆ ಇಬ್ಬರು ಪತ್ನಿಯರು. ಪ್ರಕರಣ ಸಂಬಂಧ ಆರೋಪಿಯನ್ನು ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು