AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ. ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ. ದುಡ್ಡು […]

ಕುಡಿಯಲು ದುಡ್ಡು ಕೊಡದಿಕ್ಕೆ ಬೈಕ್ ಹತ್ತಿಸಿ ಪತ್ನಿಯನ್ನೇ ಕೊಂದ ಪಾಪಿ!
ಸಾಧು ಶ್ರೀನಾಥ್​
|

Updated on: May 05, 2020 | 4:53 PM

Share

ಬಾಗಲಕೋಟೆ: ಕುಡಿಯಲು ಹಣ ನೀಡಲಿಲ್ಲ ಎಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪತ್ನಿ ಮೇಲೆ ಬೈಕ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಇಳಕಲ್ ನಗರದ ಜೋಷಿ ಗಲ್ಲಿಯಲ್ಲಿ ನಡೆದಿದೆ. ಶಾರದ ಚೌಹಾಣ್(32) ಕೊಲೆಯಾದ ದುರ್ದೈವಿ.

ಒಂದು ತಿಂಗಳು ಎಣ್ಣೆ ಸಿಗದಿದ್ದಕ್ಕೆ ಪ್ರತಿನಿತ್ಯವೂ ಪರದಾಡಿ ಹೆಂಡತಿ ಜೊತೆ ಆರೋಪಿ ಚಂದಪ್ಪ ಚೌಹಾಣ್ ಜಗಳ ಮಾಡ್ತಿದ್ದ. ನಿನ್ನೆ ಮದ್ಯದಂಗಡಿ ಓಪನ್ ಆಗಿದ್ದರಿಂದ ದುಡ್ಡು ಕೊಡುವಂತೆ ಪತ್ನಿಯನ್ನು ಪೀಡಿಸಿದ್ದಾನೆ. ಪತ್ನಿ ಕೆಲಸ ಮಾಡುವ ಮನೆ ಬಳಿ ಹೋಗಿ ಕುಡಿಯಲು ಹಣ ಕೇಳಿದ್ದಾನೆ.

ದುಡ್ಡು ಇಲ್ಲ ಅಂತೇಳಿ ನಡೆದುಕೊಂಡು ಶಾರದ ಮನೆಯತ್ತ ಹೊರಟಿದ್ಲು. ಹಣ ಕೊಡದ ಸಿಟ್ಟಿನಲ್ಲಿ ಹಿಂದಿನಿಂದ ತನ್ನ ಬೈಕನ್ನು ಸ್ಪೀಡಾಗಿ ಓಡಿಸಿ ಹೆಂಡತಿಗೆ ಡಿಕ್ಕಿ ಹೊಡೆದಿದ್ದಾನೆ. ಬೈಕ್ ಡಿಕ್ಕಿಯಾಗಿ ನೆಲಕ್ಕೆ ಉರುಳಿ ಬಿದ್ದಿದ್ರೂ ಪತ್ನಿ ಕಡೆ ತಿರುಗಿಯೂ ನೋಡದೆ ಪತಿ ಮನೆ ಕಡೆ ಹೊರಟಿದ್ದ.

ಮಹಿಳೆಯ ಸ್ಥಿತಿಯನ್ನು ಕಂಡು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾಳೆ. ಆರೋಪಿ ಚಂದಪ್ಪ ಚೌಹಾಣ್​ಗೆ ಇಬ್ಬರು ಪತ್ನಿಯರು. ಪ್ರಕರಣ ಸಂಬಂಧ ಆರೋಪಿಯನ್ನು ಇಳಕಲ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್