AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ
ಮುಬಾರಕ್, ಶಿರೀನ್ ಬಾನು
Follow us
TV9 Web
| Updated By: guruganesh bhat

Updated on:Aug 23, 2021 | 7:13 PM

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿ ಪತಿ ಮುಬಾರಕ್‌ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 5ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಪತ್ನಿ ಶಿರೀನ್ ಬಾನು (25) ಎಂಬಾಕೆಯನ್ನು ಪತಿ ಮುಬಾರಕ್ ಕೊಲೆ ಮಾಡಿದ್ದ.

ಶಿರೀನ್ ಬಾನು ಹತ್ಯೆಗೈದು ಆಕೆಯ ಮೃತದೇಹವನ್ನು ಸ್ವತಃ ಪತಿಯೇ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಈ ವಿಷಯ ತಿಳಿಯದೆ ಶಿರೀನ್ ಬಾನುಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಬಳಿಕ, ಶಿರೀನ್ ಪತಿ ಮುಬಾರಕ್ ಮೇಲೆ ಪೋಷಕರಿಗೆ ಅನುಮಾನ ಉಂಟಾಗಿತ್ತು. ಹೀಗಾಗಿ ಮುಬಾರಕ್‌ನನ್ನು ಬಂಧಿಸಿ ವಿಚಾರಿಸುವಂತೆ, ಶಿರೀನ್ ಬಾನು ಪೋಷಕರು ಒತ್ತಡ ಹಾಕಿದ್ದರು. ಬಳಿಕ, ಇಂದು (ಆಗಸ್ಟ್ 23) ವಕೀಲರೊಂದಿಗೆ ಮುಬಾರಕ್ ಠಾಣೆಗೆ ಹಾಜರಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸರ ವಿಚಾರಣೆ ವೇಳೆ ಮುಬಾರಕ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.

ಮುಬಾರಕ್ (32) ಕೊಲೆ ಮಾಡಿದ ಪತಿ, ಆತ ಹಾಸಿಗೆ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ದಾವಣಗೆರೆಯಿಂದ ಬಂದು ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನ ಹೇಯಕೃತ್ಯದಿಂದ ಊಟದ ವಿಷಯವಾಗಿ ಮಡದಿಯ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಗ ಪೊಲೀಸರಿಂದ ಕೆರೆಯಲ್ಲಿ ಶವ ಹುಡುಕಾಡಲು ಸಿದ್ದತೆ ನಡೆಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಕೊಲೆ; ಪೊಲೀಸರಿಂದ ಚುರುಕಿನ ತನಿಖೆ

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

Published On - 4:06 pm, Mon, 23 August 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ