AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ
ಮುಬಾರಕ್, ಶಿರೀನ್ ಬಾನು
TV9 Web
| Edited By: |

Updated on:Aug 23, 2021 | 7:13 PM

Share

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿ ಪತಿ ಮುಬಾರಕ್‌ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 5ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಪತ್ನಿ ಶಿರೀನ್ ಬಾನು (25) ಎಂಬಾಕೆಯನ್ನು ಪತಿ ಮುಬಾರಕ್ ಕೊಲೆ ಮಾಡಿದ್ದ.

ಶಿರೀನ್ ಬಾನು ಹತ್ಯೆಗೈದು ಆಕೆಯ ಮೃತದೇಹವನ್ನು ಸ್ವತಃ ಪತಿಯೇ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಈ ವಿಷಯ ತಿಳಿಯದೆ ಶಿರೀನ್ ಬಾನುಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಬಳಿಕ, ಶಿರೀನ್ ಪತಿ ಮುಬಾರಕ್ ಮೇಲೆ ಪೋಷಕರಿಗೆ ಅನುಮಾನ ಉಂಟಾಗಿತ್ತು. ಹೀಗಾಗಿ ಮುಬಾರಕ್‌ನನ್ನು ಬಂಧಿಸಿ ವಿಚಾರಿಸುವಂತೆ, ಶಿರೀನ್ ಬಾನು ಪೋಷಕರು ಒತ್ತಡ ಹಾಕಿದ್ದರು. ಬಳಿಕ, ಇಂದು (ಆಗಸ್ಟ್ 23) ವಕೀಲರೊಂದಿಗೆ ಮುಬಾರಕ್ ಠಾಣೆಗೆ ಹಾಜರಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸರ ವಿಚಾರಣೆ ವೇಳೆ ಮುಬಾರಕ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.

ಮುಬಾರಕ್ (32) ಕೊಲೆ ಮಾಡಿದ ಪತಿ, ಆತ ಹಾಸಿಗೆ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ದಾವಣಗೆರೆಯಿಂದ ಬಂದು ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನ ಹೇಯಕೃತ್ಯದಿಂದ ಊಟದ ವಿಷಯವಾಗಿ ಮಡದಿಯ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಗ ಪೊಲೀಸರಿಂದ ಕೆರೆಯಲ್ಲಿ ಶವ ಹುಡುಕಾಡಲು ಸಿದ್ದತೆ ನಡೆಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಕೊಲೆ; ಪೊಲೀಸರಿಂದ ಚುರುಕಿನ ತನಿಖೆ

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

Published On - 4:06 pm, Mon, 23 August 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ