AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಹೆಂಡತಿಯನ್ನೇ ಕೊಂದ ಗಂಡ
ಮುಬಾರಕ್, ಶಿರೀನ್ ಬಾನು
TV9 Web
| Edited By: |

Updated on:Aug 23, 2021 | 7:13 PM

Share

ಬೆಂಗಳೂರು: ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿ ಪತಿ ಮುಬಾರಕ್‌ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 5ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಪತ್ನಿ ಶಿರೀನ್ ಬಾನು (25) ಎಂಬಾಕೆಯನ್ನು ಪತಿ ಮುಬಾರಕ್ ಕೊಲೆ ಮಾಡಿದ್ದ.

ಶಿರೀನ್ ಬಾನು ಹತ್ಯೆಗೈದು ಆಕೆಯ ಮೃತದೇಹವನ್ನು ಸ್ವತಃ ಪತಿಯೇ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಈ ವಿಷಯ ತಿಳಿಯದೆ ಶಿರೀನ್ ಬಾನುಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಬಳಿಕ, ಶಿರೀನ್ ಪತಿ ಮುಬಾರಕ್ ಮೇಲೆ ಪೋಷಕರಿಗೆ ಅನುಮಾನ ಉಂಟಾಗಿತ್ತು. ಹೀಗಾಗಿ ಮುಬಾರಕ್‌ನನ್ನು ಬಂಧಿಸಿ ವಿಚಾರಿಸುವಂತೆ, ಶಿರೀನ್ ಬಾನು ಪೋಷಕರು ಒತ್ತಡ ಹಾಕಿದ್ದರು. ಬಳಿಕ, ಇಂದು (ಆಗಸ್ಟ್ 23) ವಕೀಲರೊಂದಿಗೆ ಮುಬಾರಕ್ ಠಾಣೆಗೆ ಹಾಜರಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸರ ವಿಚಾರಣೆ ವೇಳೆ ಮುಬಾರಕ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.

ಮುಬಾರಕ್ (32) ಕೊಲೆ ಮಾಡಿದ ಪತಿ, ಆತ ಹಾಸಿಗೆ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ದಾವಣಗೆರೆಯಿಂದ ಬಂದು ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನ ಹೇಯಕೃತ್ಯದಿಂದ ಊಟದ ವಿಷಯವಾಗಿ ಮಡದಿಯ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.

ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಗ ಪೊಲೀಸರಿಂದ ಕೆರೆಯಲ್ಲಿ ಶವ ಹುಡುಕಾಡಲು ಸಿದ್ದತೆ ನಡೆಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಕೊಲೆ; ಪೊಲೀಸರಿಂದ ಚುರುಕಿನ ತನಿಖೆ

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

Published On - 4:06 pm, Mon, 23 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ