Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನೆ ಯಜನಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು, ಈ ಹಣದಲ್ಲಿ ಹಲವರು ಹಲವು ಕೆಲಸಗಳಿಗೆ ಉಪಯೋಗ ಮಾಡಿಕೊಂಡಿರುವ ವರದಿಯಾಗಿದೆ. ಇದರ ಮಧ್ಯ ಗೃಹಲಕ್ಷ್ಮೀ ಹಣವನ್ನು ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾಗಿದ್ದಾಳೆ. ತವರು ಮನೆ ಸೇರಿದ್ದ ,ಮಹಿಳೆ ಹಣ ತೆಗೆದುಕೊಂಡು ಬರಲು ಹೋದಾಗ ಗಂಡನೇ ಹತ್ಯೆ ಮಾಡಿದ್ದಾನೆ.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!
ಗೃಹಲಕ್ಷ್ಮೀ ಹಣ ತರಲು ಹೋಗಿದ್ದ ಮಹಿಳೆ ಕೊಲೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 23, 2024 | 12:16 PM

ದಾವಣಗೆರೆ, (ಅಕ್ಟೋಬರ್ 23): ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್​ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, ಗೃಹ ಲಕ್ಷ್ಮಿ ಹಣ ಡ್ರಾ ಮಾಡಿಕೊಳ್ಳಲು ಒಡೆರಹಳ್ಳಿ ಗ್ರಾಮಕ್ಕೆ ಬಂದಿದ್ದಾಳೆ. ಈ ವೇಳೆ ಪತಿ ಅಣ್ಣಪ್ಪ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಕೂಡಿಟ್ಟ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಗೋಕಾಕ್ ಗೃಹಿಣಿ ಬಾಗವ್ವಾ ಸಣ್ಣಕ್ಕಿ

ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ಮಂಗಳವಾರ ಜಗಳೂರು ತಾಲೂಕಿನ ಅಸಗೋಡ್​​ ಬ್ಯಾಂಕ್​​ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್​ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಹಣದಿಂದ ಹಲವು ಮಹಿಳೆಯರಿಗೆ ಅನುಕೂಲವಾಗಿದೆ. ಈ ಯೋಜನೆಯ ಹಣದಿಂದ ಮಹಿಳೆಯರು ಒಳ್ಳೆ ಕೆಲಸಗಳಿಗೆ ಉಪಯೋಗಿಸಿಕೊಂಡಿದ್ದಾರೆ. ಓರ್ವ ಮಹಿಳೆ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಗ್ರಂಥಾಲಯ ನಿರ್ಮಿಸಿದ್ದರೆ, ಮತ್ತೋರ್ವ ಮಹಿಳೆ ಮನೆಗೆ ಟಿವಿ, ಫ್ರಿಜ್ ಕೊಂಡುಕೊಂಡಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ್ದಾರೆ. ಇನ್ನು ಇನ್ನೋರ್ವ ಮಹಿಳೆ ಗ್ರಾಮದೇವತೆಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಹೀಗೆ ಗೃಹಲಕ್ಷ್ಮೀ ಹಣದಿಂದ ಸದ್ಭಳಿಕೆಯಾಗುತ್ತಿರುವುದಕ್ಕೆ ಸಿಎಂ ಆದಿಯಾಗಿ ಸಚಿವರು ಸಂತೋಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿಕೊಂಡು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಆದ್ರೆ, ದುರ್ವೈವ ಇದೇ ಗೃಹಲಕ್ಷ್ಮೀ ಹಣ ತರಲು ಹೋದ ಮಹಿಳೆ ಹೆಣವಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್