AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮನೆ ಯಜನಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದು, ಈ ಹಣದಲ್ಲಿ ಹಲವರು ಹಲವು ಕೆಲಸಗಳಿಗೆ ಉಪಯೋಗ ಮಾಡಿಕೊಂಡಿರುವ ವರದಿಯಾಗಿದೆ. ಇದರ ಮಧ್ಯ ಗೃಹಲಕ್ಷ್ಮೀ ಹಣವನ್ನು ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾಗಿದ್ದಾಳೆ. ತವರು ಮನೆ ಸೇರಿದ್ದ ,ಮಹಿಳೆ ಹಣ ತೆಗೆದುಕೊಂಡು ಬರಲು ಹೋದಾಗ ಗಂಡನೇ ಹತ್ಯೆ ಮಾಡಿದ್ದಾನೆ.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!
ಗೃಹಲಕ್ಷ್ಮೀ ಹಣ ತರಲು ಹೋಗಿದ್ದ ಮಹಿಳೆ ಕೊಲೆ
TV9 Web
| Edited By: |

Updated on: Oct 23, 2024 | 12:16 PM

Share

ದಾವಣಗೆರೆ, (ಅಕ್ಟೋಬರ್ 23): ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್​ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, ಗೃಹ ಲಕ್ಷ್ಮಿ ಹಣ ಡ್ರಾ ಮಾಡಿಕೊಳ್ಳಲು ಒಡೆರಹಳ್ಳಿ ಗ್ರಾಮಕ್ಕೆ ಬಂದಿದ್ದಾಳೆ. ಈ ವೇಳೆ ಪತಿ ಅಣ್ಣಪ್ಪ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಕೂಡಿಟ್ಟ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಗೋಕಾಕ್ ಗೃಹಿಣಿ ಬಾಗವ್ವಾ ಸಣ್ಣಕ್ಕಿ

ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ಮಂಗಳವಾರ ಜಗಳೂರು ತಾಲೂಕಿನ ಅಸಗೋಡ್​​ ಬ್ಯಾಂಕ್​​ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್​ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಹಣದಿಂದ ಹಲವು ಮಹಿಳೆಯರಿಗೆ ಅನುಕೂಲವಾಗಿದೆ. ಈ ಯೋಜನೆಯ ಹಣದಿಂದ ಮಹಿಳೆಯರು ಒಳ್ಳೆ ಕೆಲಸಗಳಿಗೆ ಉಪಯೋಗಿಸಿಕೊಂಡಿದ್ದಾರೆ. ಓರ್ವ ಮಹಿಳೆ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಗ್ರಂಥಾಲಯ ನಿರ್ಮಿಸಿದ್ದರೆ, ಮತ್ತೋರ್ವ ಮಹಿಳೆ ಮನೆಗೆ ಟಿವಿ, ಫ್ರಿಜ್ ಕೊಂಡುಕೊಂಡಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಮಹಿಳೆಯೊಬ್ಬರು ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿಸಿದ್ದಾರೆ. ಇನ್ನು ಇನ್ನೋರ್ವ ಮಹಿಳೆ ಗ್ರಾಮದೇವತೆಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಹೀಗೆ ಗೃಹಲಕ್ಷ್ಮೀ ಹಣದಿಂದ ಸದ್ಭಳಿಕೆಯಾಗುತ್ತಿರುವುದಕ್ಕೆ ಸಿಎಂ ಆದಿಯಾಗಿ ಸಚಿವರು ಸಂತೋಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿಕೊಂಡು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. ಆದ್ರೆ, ದುರ್ವೈವ ಇದೇ ಗೃಹಲಕ್ಷ್ಮೀ ಹಣ ತರಲು ಹೋದ ಮಹಿಳೆ ಹೆಣವಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ