AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar: ಪತ್ನಿಯನ್ನ ಕೊಂದು ಬ್ಯಾರೆಲ್​​ನಲ್ಲಿ ಬಚ್ಚಿಟ್ಟ ಪತಿರಾಯ, ಮನೆ ಖಾಲಿ ಮಾಡುವಾಗ ಭಯಾನಕ ಘಟನೆ ಬಯಲಿಗೆ

ಪತಿ, ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವನಲ್ಲಿ ನಡೆದಿದೆ.

Karwar: ಪತ್ನಿಯನ್ನ ಕೊಂದು ಬ್ಯಾರೆಲ್​​ನಲ್ಲಿ ಬಚ್ಚಿಟ್ಟ ಪತಿರಾಯ, ಮನೆ ಖಾಲಿ ಮಾಡುವಾಗ ಭಯಾನಕ ಘಟನೆ ಬಯಲಿಗೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Feb 26, 2023 | 1:13 PM

Share

ಕಾರವಾರ: ದೆಹಲಿಯ ಶ್ರದ್ಧಾ ಹತ್ಯೆ ಬಳಿಕ ಕರ್ನಾಟಕದಲ್ಲೂ ಇದೇ ರೀತಿಯಾಗಿ ಸದ್ದಿಲ್ಲದೇ ಬೀಕರ ಹತ್ಯೆಗಳು ನಡೆಯುತ್ತಿವೆ. ಪತಿ, ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಹಳಿಯಾಳದ (Haliyal) ತೇರಗಾಂವನಲ್ಲಿ ನಡೆದಿದೆ. ಶಾಂತಕುಮಾರಿ (33) ಕೊಲೆಯಾದ ಪತ್ನಿ. ತುಕಾರಾಮ್ ಮಡಿವಾಳ್ (38) ಕೊಲೆ ಮಾಡಿದ ಪತಿ.

ಕತ್ತು‌ಹಿಸುಕಿ ಕೊಲೆ ಮಾಡಿ ದೇಹವನ್ನು ಬ್ಯಾರಲ್​ನಲ್ಲಿಟ್ಟಿದ್ದ ಪತಿ

ತುಕಾರಾಮ ಪರ ಸ್ತ್ರೀಯರೊಂದಿಗೆ ಸಲುಗೆಯಿಂದ ಇರುತ್ತಿದ್ದನು. ಇದನ್ನು ಪತ್ನಿ ಶಾಂತಕುಮಾರಿ, ಪತಿ ತುಕಾರಾಮ್​ಗೆ ಪ್ರಶ್ನಿಸುತ್ತಿದ್ದಳು. ಈ ವಿಚಾರವಾಗಿ ಗಂಡ ಹೆಂಡತಿಯರ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿದಾಗ, ತುಕಾರಾಮ್, ಶಾಂತಕುಮಾರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತ್ನಿಯ ಶವವನ್ನು ನೀರು ತುಂಬುವ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದನು.

ಬಳಿಕ ಮನೆ ಖಾಲಿ ಮಾಡುವ ನೆಪದಲ್ಲಿ ಟಾಟಾ ಎಸ್​ ಬಾಡಿಗೆ ಪಡೆದು ಶವ ತುಂಬಿದ ಬ್ಯಾರಲ್​​ ಸಾಗಿಸಿ, ಕಾಡಿನಲ್ಲಿ ಎಸೆದು ಬಂದಿದ್ದಾನೆ. ಇನ್ನು ದಂಪತಿ ಬಾಡಿಗೆ ಮನೆಯಲ್ಲಿದ್ದು, ಶನಿವಾರ ಮನೆ ಕಾಲಿ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಮನಿಸಿದ ಮನೆಯ ಮಾಲೀಕರು ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ತುರ್ತಾಗಿ ಗೋವಾಗೆ ಹೋಗಬೇಕಾಗಿದೆ ಎಂದು ಉತ್ತರಿಸಿದ್ದಾನೆ.

ದಂಪತಿಯ ಜಗಳವನ್ನು ಮನೆ ಮಾಲೀಕರು ತಿಳಿದ ಹಿನ್ನೆಲೆ ಹಾಗೂ ಈತನ ಹೇಳಿಕೆಯಿಂದ ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾನೆ. ಆರೋಪಿ ಶಾಂತಾರಾಮ್​​ನನ್ನು ಪೊಲೀಸರು ಬಂಧಸಿದ್ದಾರೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ