AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ.

Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ
ಸಾಂದರ್ಭಿಕ ಚಿತ್ರ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on:Jul 10, 2023 | 1:24 PM

Share

ಹುಬ್ಬಳ್ಳಿ: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಹುಬ್ಬಳ್ಳಿಯ (Hubli) ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ. ಮಂಜುಳಾ ಮೃತ ದುರ್ದೈವಿ. ಪತಿ ಭೀಮಪ್ಪ ಮುತ್ತಲಗಿ ಕೊಲೆ ಆರೋಪಿ. ಭೀಮಪ್ಪ ಮುತ್ತಲಗಿ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಕೋಲಾರ: ಕಳೆದವಾರ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು (ಜು.10) ಮತ್ತೊಂದು ಕೊಲೆ ನಡೆದಿದೆ. ಕೋಲಾರ ಹೊರವಲಯದ ಎಪಿಎಂಸಿ ಮಾರುಕಟ್ಟೆ ಬಳಿ ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಶಾಹೀದ್ ನಗರ ನಿವಾಸಿ ಅಮೀರ್ ಖಾನ್ ಅಲಿಯಾಸ್​ ತನು ಕೊಲೆಯಾದ ವ್ಯಕ್ತಿ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್​ (32) ಮೃತ ಯುವಾ ಬ್ರಿಗೇಡ್ ಕಾರ್ಯಕರ್ತ. ಮೃತ ಕಾರ್ಯಕರ್ತ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು.09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ಆಗಿತ್ತು. ವಾಗ್ವಾದ ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Mon, 10 July 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?