Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ.

Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Jul 10, 2023 | 1:24 PM

ಹುಬ್ಬಳ್ಳಿ: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಪತಿ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಹುಬ್ಬಳ್ಳಿಯ (Hubli) ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ. ಮಂಜುಳಾ ಮೃತ ದುರ್ದೈವಿ. ಪತಿ ಭೀಮಪ್ಪ ಮುತ್ತಲಗಿ ಕೊಲೆ ಆರೋಪಿ. ಭೀಮಪ್ಪ ಮುತ್ತಲಗಿ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಕೋಲಾರ: ಕಳೆದವಾರ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು (ಜು.10) ಮತ್ತೊಂದು ಕೊಲೆ ನಡೆದಿದೆ. ಕೋಲಾರ ಹೊರವಲಯದ ಎಪಿಎಂಸಿ ಮಾರುಕಟ್ಟೆ ಬಳಿ ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

ಶಾಹೀದ್ ನಗರ ನಿವಾಸಿ ಅಮೀರ್ ಖಾನ್ ಅಲಿಯಾಸ್​ ತನು ಕೊಲೆಯಾದ ವ್ಯಕ್ತಿ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಎರಡು ಗುಂಪುಗಳ ನಡುವೆ ಗಲಾಟೆ, ಯುವಾ ಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ಕೊಲೆಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ವೇಣುಗೋಪಾಲ್ ನಾಯಕ್​ (32) ಮೃತ ಯುವಾ ಬ್ರಿಗೇಡ್ ಕಾರ್ಯಕರ್ತ. ಮೃತ ಕಾರ್ಯಕರ್ತ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ನಿನ್ನೆ (ಜು.09) ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ಆಗಿತ್ತು. ವಾಗ್ವಾದ ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Mon, 10 July 23