AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ

ಆರೋಪಿ ದಂಪತಿ ದಿಲೀಪ್​ ಮತ್ತು ತುಳಸಿ. ಸಂತ್ರಸ್ತ ಮಹಿಳೆ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಮನೆಯ ಹಿಂಬದಿಯಲ್ಲೇ ಇವರೂ ವಾಸವಾಗಿದ್ದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ದಿಲೀಪ್ ಆ ಮಹಿಳೆಯನ್ನು ಎಳೆದುಕೊಂಡು ಬಂದಿದ್ದಾನೆ.

ಪಕ್ಕದ ಮನೆ ಮಹಿಳೆಯನ್ನು ಎಳೆದುಕೊಂಡು ಬಂದು ರೇಪ್​ ಮಾಡಿದ ಪತಿ; ಮೊಬೈಲ್​​ನಲ್ಲಿ ವಿಡಿಯೋ ಮಾಡಿ ವಿಕೃತಿ ಮೆರೆದ ಪತ್ನಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 09, 2022 | 4:41 PM

Share

ವಿವಾಹಿತ ವ್ಯಕ್ತಿಯೊಬ್ಬ ತನ್ನ ಪಕ್ಕದ ಮನೆಯವನ ಪತ್ನಿಯನ್ನು ಎಳೆದು ತಂದು ರೇಪ್​ ಮಾಡುತ್ತಿದ್ದರೆ, ಆತನ ಪತ್ನಿ ಅದನ್ನು ಮೊಬೈಲ್​​ನಲ್ಲಿ ವಿಡಿಯೋ (Mobile Video) ಮಾಡಿ ವಿಕೃತಿ ಮೆರೆದಿದ್ದಾಳೆ. ಈ ಘಟನೆ ನಡೆದದ್ದು ಆಂಧ್ರಪ್ರದೇಶದ ವಿಜಯವಾಡದಲ್ಲಿ. ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಸ್ಥಳೀಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಮಹಿಳೆಯ ಪತಿ ಅಜಿತ್​ ಸಿಂಗ್​ ನಗರ ಸಮೀಪವೇ ಅಡುಗೆ ಕೆಲಸ ಮಾಡಿಕೊಂಡಿದ್ದ. ಅಂದರೆ ಅಡುಗೆ ಮಾಡಿ, ಪೂರೈಸುವ ಕೆಲಸ. ಎಂದಿನಂತೆ ಅವನು ಕೆಲಸಕ್ಕೆ ಹೋಗಿದ್ದ. ರಾತ್ರಿ ಮನೆಗೆ ಬಂದಿರಲಿಲ್ಲ. ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದರು. ಈ ವೇಳೆ ಪಕ್ಕದ ಮನೆಯಾತ ದುಷ್ಕೃತ್ಯ ನಡೆಸಿದ್ದಾನೆ.

ಆರೋಪಿ ದಂಪತಿ ದಿಲೀಪ್​ ಮತ್ತು ತುಳಸಿ. ಸಂತ್ರಸ್ತ ಮಹಿಳೆ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಮನೆಯ ಹಿಂಬದಿಯಲ್ಲೇ ಇವರೂ ವಾಸವಾಗಿದ್ದರು. ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ದಿಲೀಪ್ ಆ ಮಹಿಳೆಯನ್ನು ಎಳೆದುಕೊಂಡು, ತನ್ನ ಮನೆಗೆ ಕರೆತಂದಿದ್ದಾನೆ. ಆಕೆಗೆ ಎರಡು ಬಾರಿ ಹೊಡೆದಿದ್ದಾನೆ. ನಂತರ ಅತ್ಯಾಚಾರ ಎಸಗಿದ್ದಾನೆ. ಇವೆಲ್ಲವನ್ನೂ ತುಳಸಿ ವಿಡಿಯೋ ಮಾಡಿದ್ದಾಳೆ. ಅದೆಲ್ಲ ಮುಗಿದ ಮೇಲೆ, ಇಲ್ಲಿ ನಡೆದಿದ್ದನ್ನು ನೀನು ಯಾರಿಗಾದರೂ ಹೇಳಿದರೆ, ನಿನ್ನಿಬ್ಬರು ಮಕ್ಕಳು ಮತ್ತು ನಿನ್ನನ್ನು ಹತ್ಯೆ ಮಾಡುವುದಾಗಿ ಈ ಕ್ರಿಮಿನಲ್​ ದಂಪತಿ ಬೆದರಿಸಿದ್ದಾರೆ. ಹಾಗಿದ್ದಾಗ್ಯೂ ಕೂಡ ಮಹಿಳೆ ಹೆದರದೆ, ಸ್ಥಳೀಯ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ 3 ಹೆಣ್ಣುಮಕ್ಕಳ ತಾಯಿಯ ತಲೆಗೆ ಮೊಳೆ ಹೊಡೆದ ಚಿಕಿತ್ಸಕ; ಇಕ್ಕಳದಿಂದ ತೆಗೆಯಲು ಯತ್ನಿಸಿ ಆಸ್ಪತ್ರೆ ಸೇರಿದ ಗರ್ಭಿಣಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು