AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡು ಹಾರಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ; ಹೆತ್ತಮ್ಮನನ್ನು ಕಳೆದುಕೊಂಡು ತಬ್ಬಲಿಯಾದ ನಾಲ್ವರು ಮಕ್ಕಳು

ಮನೆಗೆ ಬಂದಿದ್ದ ಪತಿ, ತಾನು ಬೇಟೆಯಾಡಲು ಹೋಗಬೇಕು, ಬುತ್ತಿ ಕಟ್ಟು ಎಂದು ಹೇಳಿದ್ದ. ಆದ್ರೆ, ಅಮವಾಸ್ಯೆಯಿದೆ ಬೇಟೆ ಬೇಡ, ಸುಮ್ಮನೆ ಮನೆಯಲ್ಲಿರು ಎಂದು ಪತ್ನಿ ಹೇಳಿದ್ದಳು. ಆದ್ರೆ, ಬೇಟೆಯಾಡಲೇ ಬೇಕು ಎಂದು ಪಣತೊಟ್ಟಿದ್ದ ಪಾಪಿ, ಕೊನೆಗೆ ಪ್ರಾಣಿಗಳ ಬದಲಾಗಿ ತಾಳಿ ಕಟ್ಟಿದ ಪತ್ನಿಯನ್ನೇ ಬೇಟೆಯಾಡಿದ್ದಾನೆ. ಹೌದು, ಗುಂಡು ಹಾರಿಸಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಗುಂಡು ಹಾರಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ; ಹೆತ್ತಮ್ಮನನ್ನು ಕಳೆದುಕೊಂಡು ತಬ್ಬಲಿಯಾದ ನಾಲ್ವರು ಮಕ್ಕಳು
ಆರೋಪಿ ಪತಿ, ಮೃತ ಪತ್ನಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 15, 2023 | 5:29 PM

Share

ಕಲಬುರಗಿ, ಸೆ.15: ಜಿಲ್ಲೆಯ ಚಿತ್ತಾಪುರ (Chittapur)ತಾಲೂಕಿನ ಅಲ್ಲೂರು ಬಿ ಗ್ರಾಮದಲ್ಲಿ ನಿನ್ನೆ(ಸೆ.14) ಮಧ್ಯಾಹ್ನ ಹನ್ನೆರಡು ಗಂಟೆ ಸಮಯದಲ್ಲಿ ಗುಂಡಿನ ಸದ್ದು ಕೇಳಿದೆ. ಹಾಡಹಗಲೇ ಕೇಳಿಸಿದ ಗುಂಡಿನ ಸದ್ದು ಓರ್ವ ಮಹಿಳೆಯ ಜೀವವನ್ನೇ ಬಲಿ ಪಡೆದಿದೆ. ಘಟನೆಯಲ್ಲಿ ಮೂವತ್ತಾರು ವರ್ಷದ ಹನಮವ್ವ ಎನ್ನುವ ಮಹಿಳೆ ಗುಂಡೇಟು ತಗುಲಿದ ಪರಿಣಾಮ, ಸ್ಥಳದಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ತಾಳಿ ಕಟ್ಟಿ ಸಪ್ತಪದಿ ತುಳಿದು, ಜೀವನದ ಕೊನೆಯ ಕ್ಷಣದವರೆಗೆ ಚನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದ ಪತಿಯೇ ಕೊಲೆಗೈದಿದ್ದಾನೆ. ಹೌದು, ಹನಮವ್ವಳನ್ನು ಆಕೆಯ ಪತಿ ಬಸವರಾಜ್​, ಸಿಂಗಲ್ ಬ್ಯಾರಲ್ ಗನ್​ನಿಂದ ಎರಡು ಗುಂಡು ಹೊಡೆದು ಕೊಲೆ ಮಾಡಿದ್ದಾನೆ.

ಇನ್ನು ಹನ್ನೆರಡು ವರ್ಷದ ಹಿಂದೆ ಅಲ್ಲೂರು ಬಿ ಗ್ರಾಮದ ಹನಮವ್ವಳನ್ನು, ಪಕ್ಕದ ಅಲ್ಲೂರು ಕೆ ಗ್ರಾಮದ ಬಸವರಾಜ್ ಜೊತೆ ಮದುವೆ ಮಾಡಲಾಗಿತ್ತು. ಇತ ಬೇರ್ಯಾರು ಅಲ್ಲ, ಹನಮವ್ವಳ ಸೋದರ ಮಾವ. ಆದ್ರೆ, ಮದುವೆಯಾದ ಮೇಲೆ ಪ್ರತಿನಿತ್ಯ ಕುಡಿದು ಬಂದು ಪತ್ನಿಯನ್ನು ಹೊಡೆಯುವುದೇ ಬಸವರಾಜ್​ನ ಕೆಲಸವಾಗಿತ್ತಂತೆ. ಹೀಗಾಗಿ ಹೆತ್ತವರು ಮಗಳನ್ನು ಅಲ್ಲೂರು ಬಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದರು. ಗ್ರಾಮದಲ್ಲೇ ಪ್ರತ್ಯೇಕ ಮನೆಯನ್ನು ಕೂಡ ಮಾಡಿಕೊಟ್ಟಿದ್ದರು. ಪತ್ನಿ ಜೊತೆಯೇ ಇದ್ದ ಬಸವರಾಜ್, ಇಲ್ಲಿ ಕೂಡ ಪ್ರತಿನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳ ಮಾಡಿ ಹಲ್ಲೆ ಮಾಡುವುದು ಮಾಡುತ್ತಿದ್ದನಂತೆ.

ಇದನ್ನೂ ಓದಿ:ಕಲಬುರಗಿ: ಪ್ರೀತಿಸಿ ಮದುವೆಯಾಗಿದ್ದ ಯುವತಿ ವಿದ್ಯುತ್ ಶಾಕ್​ನಿಂದ ಸಾವು; ಮಗಳದ್ದು ಕೊಲೆ ಅಂತಿರೋ ಹೆತ್ತವರು, ಇಲ್ಲಿದೆ ವಿವರ

ದಂಪತಿಗೆ ನಾಲ್ಕು ಮಕ್ಕಳು ಕೂಡ ಇವೆ. ಹನಮವ್ವ ತಾನೇ ಸ್ವತಃ ಕೂಲಿ ಕೆಲಸ ಮಾಡಿ ಮಕ್ಕಳನ್ನು ಕೂಡ ಸಾಕಿದ್ದಳು. ನಿನ್ನೆ ಮನೆಗೆ ಕುಡಿದು ಬಂದಿದ್ದ ಬಸವರಾಜ್​ಗೆ ಪ್ರತಿನಿತ್ಯ ಕುಡಿದು ಬರ್ತಿಯಾ, ಮಕ್ಕಳಿಗೆ ತುಂಡು ಬಟ್ಟೆಯನ್ನು ಕೂಡ ನೀನು ಕೊಡಿಸಿಲ್ಲ ಎಂದು ಹೇಳಿದ್ದಳಂತೆ. ಹೀಗಾಗಿ ಬಸವರಾಜ್, ಪತ್ನಿ ಜೊತೆ ಜಗಳ ಮಾಡಿದ್ದ. ಮುಂಜಾನೆ ಹೆತ್ತವರ ಮನೆಯಲ್ಲಿ ಹನಮವ್ವ ಇದ್ದಾಗ, ಅಲ್ಲಿಯೇ ಬಂದಿದ್ದ ಬಸವರಾಜ್ ಸ್ವಲ್ಪ ಹೊರಗೆ ಬಾ ಅಂತ ಕರೆದಿದ್ದ. ತಾನು ಬೇಟೆಯಾಡಲು ಹೋಗ್ತಿದ್ದೇನೆ, ನನಗೆ ಬುತ್ತಿಯನ್ನು ಕಟ್ಟು ಎಂದು ಹೇಳಿದ್ದ. ಆದ್ರೆ, ಅಮವಾಸ್ಯೆಯಿದೆ, ಮನೆಯಲ್ಲೇ ಸುಮ್ಮನೇ ಇರು ಎಂದು ಪತ್ನಿ ಹೇಳಿದ್ದಳು. ಇದರಿಂದ ಸಿಟ್ಟಾದ ಪತಿ ಬಸವರಾಜ್, ಪತ್ನಿ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.

ಸದ್ಯ ಹನಮವ್ವಳ ಕೊಲೆಗೆ ಸಂಬಂಧಿಸಿದಂತೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ನಂತರ ಹನಮವ್ವಳ ಪತಿ ಬಸವರಾಜ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಮತ್ತೊಂದೆಡೆ ಸಿಂಗಲ್ ಬ್ಯಾರಲ್​ ಗನ್ ಯಾರದ್ದು, ಆರೋಪಿ ಕೈಗೆ ಗನ್ ಸಿಕ್ಕಿದ್ದು ಹೇಗೆ ಅನ್ನೋದರ ಬಗ್ಗೆ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದ್ರೆ, ಪಾಪಿ ಪತಿಯ ಕೃತ್ಯಕ್ಕೆ ಇದೀಗ ನಾಲ್ಕು ಮಕ್ಕಳು ತಾಯಿಯಿಲ್ಲದೇ ತಬ್ಬಲಿಯಾಗಿದ್ದು ಮಾತ್ರ ದುರಂತವೇ ಸರಿ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ