ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ […]

ಅನೈತಿಕ ಸಂಬಂಧ ಶಂಕೆ: 17 ಬಾರಿ ಚಾಕು ಇರಿದ್ರೂ ಬದುಕುಳಿದ ಗೃಹಿಣಿ!
ಸಾಧು ಶ್ರೀನಾಥ್​

Updated on: Feb 22, 2020 | 4:48 PM

ಬೆಂಗಳೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಗೆ 17 ಬಾರಿ ಚಾಕುವಿನಿಂದ ಇರಿದಿರುವ ಘಟನೆ ವಿಠ್ಠಲ್ ನಗರದಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಉಮೇಶ್​ ಪತ್ನಿ ಇಂದಿರಾಗೆ ಚಾಕುವಿನಿಂದ ಇರಿದಿದ್ದಾನೆ. ಹೀಗಾಗಿ ಆರೋಪಿ ಉಮೇಶ್​ನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಏಳು ವರ್ಷಗಳ ಹಿಂದೆ ಉಮೇಶ್-ಇಂದಿರಾ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ಬಿರುಕು ಮೂಡಿ ದೂರವಾಗಿದ್ದರು. ನಂತರ ಕಳೆದ ಒಂದು ವರ್ಷದ ಹಿಂದೆ ಮತ್ತೆ ಇಬ್ಬರು ಒಂದಾಗಿದ್ದರು. ಆದ್ರೆ ಈ ಮಧ್ಯೆ ಮತ್ತೆ ಪತಿ-ಪತ್ನಿ ನಡುವೆ ಜಗಳ ಶುರುವಾಗಿತ್ತು.

ಫೆ.20ರಂದು ತಡರಾತ್ರಿ ಮನೆಗೆ ಕುಡಿದು ಬಂದಿದ್ದ ಉಮೇಶ್ ಪತ್ನಿ ಜೊತೆ ಜಗಳ ಮಾಡಿದ್ದಾನೆ. ಬಳಿಕ ಕುಡಿದ ಅಮಲಿನಲ್ಲಿ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿ ಮೇಲೆ ಹಲ್ಲೆ ಎಸಗಿದ್ದಾನೆ. ಒಟ್ಟು 17 ಬಾರಿ ಇಂದಿರಾಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಪತ್ನಿ ಇಂದಿರಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಂದಿರಾ ಪಾರಾಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us