AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣ, ಶಾಲೆಯನ್ನು ಮುಚ್ಚಲು ಆದೇಶ ನೀಡಿದ ಸರ್ಕಾರ

4 ವರ್ಷದ ಬಾಲಕಿಯ ಅತ್ಯಾಚಾರದ ಆರೋಪದ ನಂತರ ತೆಲಂಗಾಣ ಸರ್ಕಾರದಿಂದ ಹೈದರಾಬಾದಿನ ಶಾಲೆಯ ಮಾನ್ಯತೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Hyderabad: 4 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣ, ಶಾಲೆಯನ್ನು ಮುಚ್ಚಲು ಆದೇಶ ನೀಡಿದ ಸರ್ಕಾರ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 21, 2022 | 8:03 PM

Share

ತೆಲಂಗಾಣ: ಹೈದರಾಬಾದ್‌ನಲ್ಲಿ (Hyderabad) ಖಾಸಗಿ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಪ್ರಸ್ತುತ ಶಾಲೆಗೆ  ನೀಡಲಾಗಿದ್ದ ಸರ್ಕಾರದ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ವಸತಿ ಕಲ್ಪಿಸಬೇಕು ಎಂದು ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಯಾವ ಭದ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ತೆಲಂಗಾಣದ ಶಿಕ್ಷಣ ಕಾರ್ಯದರ್ಶಿ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಸಮಿತಿಯು ತನ್ನ ಸದಸ್ಯರಾಗಿ ಶಾಲಾ ಶಿಕ್ಷಣ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆಗೆ ವ್ಯವಹರಿಸುವ ಹಿರಿಯ ಅಧಿಕಾರಿಯನ್ನು ಹೊಂದಿರುತ್ತಾರೆ. ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಸಚಿವರು ಹೇಳಿದೆ.

ಘಟನೆ ಬಹಿರಂಗವಾದ ನಂತರ ಬಂಜಾರಾ ಹಿಲ್ಸ್‌ನ ಶಾಲೆಯನ್ನು ಮುಚ್ಚಲಾಗಿದೆ. ಎರಡು ತಿಂಗಳಿನಿಂದ ಮಗುವಿನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ಪ್ರಾಂಶುಪಾಲರ ಚಾಲಕನನ್ನು ಬುಧವಾರ ಬಂಧಿಸಲಾಗಿದೆ. ದೌರ್ಜನ್ಯದ ಬಗ್ಗೆ ದೂರನ್ನು ತಳ್ಳಿದ ಶಾಲೆಯ ಪ್ರಾಂಶುಪಾಲರು ಅದರ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ ಎಂದು ವರದಿಯಾಗಿದೆ. ಪೋಷಕರ ಪ್ರತಿಭಟನೆಯ ನಂತರ ಅವರನ್ನು ಬಂಧಿಸಲಾಯಿತು.

ಮಗುವಿನ ವರ್ತನೆಯಲ್ಲಿ ಬದಲಾವಣೆಯನ್ನು ಗಮನಿಸಿದ ಪೋಷಕರು ವಿಚಾರಿಸಿದಾಗ, ಏನೋ ದೊಡ್ಡ ತಪ್ಪಾಗಿದೆ ಎಂದು ಗೊತ್ತಾಯ್ತು. ಮಗು ಚಾಲಕನನ್ನು ಬೊಟ್ಟು ಮಾಡಿ ತೋರಿಸಿತ್ತು. ಇದರಿಂದ ಕೋಪಗೊಂಡ ಪೋಷಕರು ಚಾಲಕನ ಮೇಲೆ ಹಲ್ಲೆ ನಡೆಸಿ ಬಂಜಾರ ಹಿಲ್ಸ್ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದು, ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ.

ಶಾಲೆಯಲ್ಲಿನ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಚಾಲಕನು ಪೂರ್ವ ಪ್ರಾಥಮಿಕ ವಿಭಾಗಕ್ಕೆ ಶಿಕ್ಷಕರ ಪಾತ್ರವನ್ನು ಹೆಚ್ಚಾಗಿ ವಹಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ.

ಮಕ್ಕಳ ಸುರಕ್ಷತೆಗೆ ನೀಡಬೇಕಾದ ಪ್ರಾಮುಖ್ಯತೆಯ ಬಗ್ಗೆ ಶಾಲಾ ಆಡಳಿತ ಮಂಡಳಿಗಳಿಗೆ ಸಚಿವರು ಕಠಿಣ ಸಂದೇಶ ರವಾನಿಸಿದ್ದು ಶಾಲೆಯನ್ನು ಮುಚ್ಚಿ ಮಕ್ಕಳನ್ನು ಸ್ಥಳಾಂತರಿಸುವ ಆದೇಶವು ಪೋಷಕರು ಮತ್ತು ಸರ್ಕಾರಿ ಅಧಿಕಾರಿಗಳಲ್ಲಿ ಸಾಷ್ಟು ಆತಂಕವನ್ನು ಉಂಟುಮಾಡಿದೆ.

ಶಾಲೆಯಲ್ಲಿ 700 ವಿದ್ಯಾರ್ಥಿಗಳು ಓದುತ್ತಿದ್ದು, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಅವರಿಗೆ ಬೇರೆ ಶಾಲೆಗಳಲ್ಲಿ ಸೀಟು ಹುಡುಕುವುದು ದೊಡ್ಡ ಸವಾಲಾಗಿ ಪರಿಣಮಿಸಲಿದೆ.

Published On - 7:06 pm, Fri, 21 October 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!