AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ತಲೆ ಕಡಿದು ಬರ್ಬರವಾಗಿ ಪತ್ನಿಯ ಹತ್ಯೆ ಮಾಡಿದ ಆಟೋ ಡ್ರೈವರ್

ಆಟೋ ಚಾಲಕನೊಬ್ಬ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದ ಪತಿ ಆಕೆಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿರುವ ಭಯಾನಕ ಘಟನೆ ವರದಿಯಾಗಿದೆ.

ಹೈದರಾಬಾದ್: ತಲೆ ಕಡಿದು ಬರ್ಬರವಾಗಿ ಪತ್ನಿಯ ಹತ್ಯೆ ಮಾಡಿದ ಆಟೋ ಡ್ರೈವರ್
ಕೊಲೆImage Credit source: Naidunia
ನಯನಾ ರಾಜೀವ್
|

Updated on: Jan 17, 2024 | 11:26 AM

Share

ಆಟೋ ಚಾಲಕನೊಬ್ಬ ಪತ್ನಿಯ ತಲೆಯನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಪತ್ನಿ ಬೇರೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬುದನ್ನು ತಿಳಿದ ಪತಿ ಆಕೆಯನ್ನು ಹತ್ಯೆ ಮಾಡಿ ಹರಿತವಾದ ಚಾಕುವಿನಿಂದ ತಲೆಯನ್ನು ಕತ್ತರಿಸಿರುವ ಭಯಾನಕ ಘಟನೆ ವರದಿಯಾಗಿದೆ.

ಹೈದರಾಬಾದ್​ನ ಅಬ್ದುಲ್ಲಾಪುರ್​ಮೆಟ್​ ಜೆಎನ್​ಎನ್​ಯುಆರ್​ಎಂ ಕಾಲೋನಿಯಲ್ಲಿ ಎರಡು ಬೆಡ್​ರೂಮಿನ ಸರ್ಕಾರಿ ವಸತಿ ಗೃಹದಲ್ಲಿ ವಾಸವಿದ್ದ ಹಂತಕ, ಹೆಂಡತಿ ತಲೆಯನ್ನು ಕತ್ತರಿಸಿ ಮನೆಯಲ್ಲಿಯೇ ಇಟ್ಟುಕೊಂಡಿದ್ದ.

41 ವರ್ಷದ ಪತ್ನಿ ಪುಷ್ಪಲತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ವಿಜಯ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆತ ಕೊಲೆಗೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಪತ್ನಿಗೆ ಬೇರೊಬ್ಬರ ಜತೆ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಜಯ್ ಹಾಗೂ ಪುಷ್ಪಲತಾ ತನ್ನ ಸಹೋದರಿಯ ಹೊಸ ಮನೆಗೆ ಹೋಗಿದ್ದರು. ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.

ಮತ್ತಷ್ಟು ಓದಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಟ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮನೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ವಿಜಯ್ ತನ್ನ ಪತ್ನಿಯನ್ನು ಫ್ಲಾಟ್​ಗೆ ಕರೆದೊಯ್ದಿದ್ದ, ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದ, ಬಳಿಕ ಆಕೆಯ ತಲೆಯನ್ನು ಕತ್ತರಿಸಿ ಫ್ಲಾಟ್​ನ ಪಕ್ಕದಲ್ಲಿಟ್ಟಿದ್ದ.

ಕೃತ್ಯ ಎಸಗಿದ ವಿಜಯ್ ರಕ್ತದ ಬಟ್ಟೆಯಲ್ಲಿದ್ದುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪುಷ್ಪಲತಾ ಶವ ಪತ್ತೆಯಾಗಿದೆ. ವರದಿಗಳ ಪ್ರಕಾರ, ವಿಜಯ್ ಹಾಗೂ ಪುಷ್ಪಲತಾ ಮದಉವೆಯಾಗಿ 15 ವರ್ಷಗಳಾಗಿವೆ. ವಿಜಯ್ ಒಮ್ಮೆ ಕುಟುಂಬ ಬಿಟ್ಟು ಹೋಗಿದ್ದ, ಪುಷ್ಪಲತಾ ನಾಪತ್ತೆ ಪ್ರಕರಣ ದಾಖಲಿಸಿದ್ದಳು.

2014ರಲ್ಲೂ ವಿಜಯ್ ಪುಷ್ಪಲತಾ ಮೇಲೆ ಹಲ್ಲೆ ನಡೆಸಿದ್ದ, ದೂರಿನ ಮೇರೆಗೆ ವಿಜಯ್ ಮೇಲೆ ಮೇಡಿಪಲ್ಲಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ