AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನಲ್ಲಿ ರಸ್ತೆ ಬದಿ ಅಂಗಡಿಯ ಮೊಮೊಸ್ ತಿಂದು ಓರ್ವ ಸಾವು, 20 ಜನರ ಸ್ಥಿತಿ ಗಂಭೀರ

ಹೈದರಾಬಾದ್​ನಲ್ಲಿ ರಸ್ತೆಯ ಬದಿಯಲ್ಲಿದ್ದ ಅಂಗಡಿಯಲ್ಲಿ ತಯಾರಿಸಿದ ಮೊಮೊಸ್ ತಿಂದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ತಿಂಡಿ ತಿಂದು 20 ಜನರ ಸ್ಥಿತಿ ಚಿಂತಾಜನಕವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಗಳು ಅದೇ ಮಾರಾಟಗಾರರಿಂದ ತಯಾರಿಸಿದ ಮೊಮೊಸ್ ಸೇವಿಸಿದ್ದಾರೆ. ಆದರೆ, ಕಳೆದ ವಾರ ಬಂಜಾರ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್​ನಲ್ಲಿ ರಸ್ತೆ ಬದಿ ಅಂಗಡಿಯ ಮೊಮೊಸ್ ತಿಂದು ಓರ್ವ ಸಾವು, 20 ಜನರ ಸ್ಥಿತಿ ಗಂಭೀರ
ಮೆಮೊಸ್
ಸುಷ್ಮಾ ಚಕ್ರೆ
|

Updated on: Oct 30, 2024 | 3:25 PM

Share

ಹೈದರಾಬಾದ್: ಹೈದರಾಬಾದ್‌ನಲ್ಲಿ ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 20 ಮಂದಿ ಈ ಮೊಮೊಸ್ ಸೇವಿಸಿದ್ದಾರೆ. ತೆಲಂಗಾಣದ ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಜಾರ ಹಿಲ್ಸ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮ್ ಬಾಬು ಮಾತನಾಡಿ, ವಿವಿಧ ಸ್ಥಳಗಳಲ್ಲಿ ಒಂದೇ ಮಾರಾಟಗಾರರಿಂದ ಮೆಮೊಸ್ ಸೇವಿಸಿ ರೇಷ್ಮಾ ಬೇಗಂ ಎಂಬ 33 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇತರ 15 ಮಂದಿಗೆ ಫುಡ್​ ಪಾಯ್ಸನ್ ಆಗಿದೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: Uttar Pradesh: ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಆರೋಪಿಗಳು ಅದೇ ಮಾರಾಟಗಾರರಿಂದ ತಯಾರಿಸಿದ ಮೊಮೊಗಳನ್ನು ಸೇವಿಸಿದ್ದಾರೆ. ಆದರೆ ಕಳೆದ ವಾರ ಬಂಜಾರ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಂಡಿ ತಿಂದ ಬಳಿಕ ಅಸ್ವಸ್ಥಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೇಹವನ್ನು ಸಮಾಧಿ ಮಾಡಲಾಗಿದೆ ಮತ್ತು ಆಕೆಯ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಮುಂದಿನ ಕ್ರಮದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಗಂಡ ಬೆಳ್ಳಗಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಹೆಂಡತಿ!

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಕಾರ್ಪೊರೇಷನ್‌ನ ಆಹಾರ ಸುರಕ್ಷತಾ ಅಧಿಕಾರಿಗಳು ಪೊಲೀಸರ ಸಹಾಯದಿಂದ ಬೀದಿ ಬದಿ ವ್ಯಾಪಾರಿಯನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ಪರವಾನಗಿ ಇಲ್ಲದೆ ಸಂಸ್ಥೆಯನ್ನು ನಡೆಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಎಚ್‌ಎಂಸಿ ಆಹಾರ ಸುರಕ್ಷತಾ ಅಧಿಕಾರಿಗಳು ಬಂಜಾರ ಹಿಲ್ಸ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ