AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ
Crime SceneImage Credit source: Times Of India
ನಯನಾ ರಾಜೀವ್
|

Updated on: Jun 22, 2023 | 12:22 PM

Share

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈಗ ಟೆಕ್ಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ, ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯು ನರಸಿಂಗಿ ಪೊಲೀಸ್​ಠಾಣಾ ವ್ಯಾಪ್ತಿಯ ಪುಪ್ಪಲಗೂಡದಲ್ಲಿ ನಡೆದಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಗಣೇಶ್​ ಯುವತಿಯನ್ನು ಮದುವೆಯಾಗಲು ಬಯಸಿದ್ದ , ಆಕೆಯು ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು.

ಯುವತಿ ಹೈದರಾಬಾದ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು, ಹಾಸ್ಟೆಲ್​ವೊಂದರಲ್ಲಿ ವಾಸವಿದ್ದಳು. ಗಣೇಶ್​ ಮಂಗಳವಾರ ರಾತ್ರಿ ಹುಡುಗಿಯ ಹಾಸ್ಟೆಲ್​ಗೆ ಹೋಗಿ ಪುಪ್ಪಲಗುಡದ ಹೋಟೆಲ್​ ಬಳಿ ಕರೆದೊಯ್ದಿದ್ದ, ಅಲ್ಲಿ ಮತ್ತೊಮ್ಮೆ ಮದುವೆ ಪ್ರಸ್ತಾಪ ಇಟ್ಟಿದ್ದ, ಆಕೆ ಮತ್ತೆ ತಿರಸ್ಕರಿಸಿದ್ದಾಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ

ನಂತರ ಯುವಕ ಬ್ಯಾಗ್​ನಲ್ಲಿ ಇಟ್ಟಿದ್ದ ಚಾಕು ತೆಗೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕತ್ತು ಹಾಗೂ ಕೈಗಳ ಮೇಲೆ ಇರಿತದ ಗಾಯಗಳಾಗಿವೆ. ಅಲ್ಲೇ ಇದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಗಣೇಶ್​ನನ್ನು ಬಂಧಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ