AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ
Crime SceneImage Credit source: Times Of India
ನಯನಾ ರಾಜೀವ್
|

Updated on: Jun 22, 2023 | 12:22 PM

Share

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈಗ ಟೆಕ್ಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ, ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯು ನರಸಿಂಗಿ ಪೊಲೀಸ್​ಠಾಣಾ ವ್ಯಾಪ್ತಿಯ ಪುಪ್ಪಲಗೂಡದಲ್ಲಿ ನಡೆದಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಗಣೇಶ್​ ಯುವತಿಯನ್ನು ಮದುವೆಯಾಗಲು ಬಯಸಿದ್ದ , ಆಕೆಯು ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು.

ಯುವತಿ ಹೈದರಾಬಾದ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು, ಹಾಸ್ಟೆಲ್​ವೊಂದರಲ್ಲಿ ವಾಸವಿದ್ದಳು. ಗಣೇಶ್​ ಮಂಗಳವಾರ ರಾತ್ರಿ ಹುಡುಗಿಯ ಹಾಸ್ಟೆಲ್​ಗೆ ಹೋಗಿ ಪುಪ್ಪಲಗುಡದ ಹೋಟೆಲ್​ ಬಳಿ ಕರೆದೊಯ್ದಿದ್ದ, ಅಲ್ಲಿ ಮತ್ತೊಮ್ಮೆ ಮದುವೆ ಪ್ರಸ್ತಾಪ ಇಟ್ಟಿದ್ದ, ಆಕೆ ಮತ್ತೆ ತಿರಸ್ಕರಿಸಿದ್ದಾಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ

ನಂತರ ಯುವಕ ಬ್ಯಾಗ್​ನಲ್ಲಿ ಇಟ್ಟಿದ್ದ ಚಾಕು ತೆಗೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕತ್ತು ಹಾಗೂ ಕೈಗಳ ಮೇಲೆ ಇರಿತದ ಗಾಯಗಳಾಗಿವೆ. ಅಲ್ಲೇ ಇದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಗಣೇಶ್​ನನ್ನು ಬಂಧಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್