AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ
Crime SceneImage Credit source: Times Of India
ನಯನಾ ರಾಜೀವ್
|

Updated on: Jun 22, 2023 | 12:22 PM

Share

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈಗ ಟೆಕ್ಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ, ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯು ನರಸಿಂಗಿ ಪೊಲೀಸ್​ಠಾಣಾ ವ್ಯಾಪ್ತಿಯ ಪುಪ್ಪಲಗೂಡದಲ್ಲಿ ನಡೆದಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಗಣೇಶ್​ ಯುವತಿಯನ್ನು ಮದುವೆಯಾಗಲು ಬಯಸಿದ್ದ , ಆಕೆಯು ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು.

ಯುವತಿ ಹೈದರಾಬಾದ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು, ಹಾಸ್ಟೆಲ್​ವೊಂದರಲ್ಲಿ ವಾಸವಿದ್ದಳು. ಗಣೇಶ್​ ಮಂಗಳವಾರ ರಾತ್ರಿ ಹುಡುಗಿಯ ಹಾಸ್ಟೆಲ್​ಗೆ ಹೋಗಿ ಪುಪ್ಪಲಗುಡದ ಹೋಟೆಲ್​ ಬಳಿ ಕರೆದೊಯ್ದಿದ್ದ, ಅಲ್ಲಿ ಮತ್ತೊಮ್ಮೆ ಮದುವೆ ಪ್ರಸ್ತಾಪ ಇಟ್ಟಿದ್ದ, ಆಕೆ ಮತ್ತೆ ತಿರಸ್ಕರಿಸಿದ್ದಾಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ

ನಂತರ ಯುವಕ ಬ್ಯಾಗ್​ನಲ್ಲಿ ಇಟ್ಟಿದ್ದ ಚಾಕು ತೆಗೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕತ್ತು ಹಾಗೂ ಕೈಗಳ ಮೇಲೆ ಇರಿತದ ಗಾಯಗಳಾಗಿವೆ. ಅಲ್ಲೇ ಇದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಗಣೇಶ್​ನನ್ನು ಬಂಧಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ