Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

Hyderabad: ಮದುವೆಯಾಗಲು ಒಪ್ಪಲಿಲ್ಲ ಎಂದು ಮಹಿಳಾ ಟೆಕ್ಕಿಯ ಕತ್ತು ಸೀಳಿದ ಯುವಕ
Crime SceneImage Credit source: Times Of India
Follow us
|

Updated on: Jun 22, 2023 | 12:22 PM

ಮದುವೆಯಾಗಲು ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳಾ ಸಾಫ್ಟ್​ವೇರ್ ಇಂಜಿನಿಯರ್​ನ ಕತ್ತು ಸೀಳಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈಗ ಟೆಕ್ಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ, ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆಯು ನರಸಿಂಗಿ ಪೊಲೀಸ್​ಠಾಣಾ ವ್ಯಾಪ್ತಿಯ ಪುಪ್ಪಲಗೂಡದಲ್ಲಿ ನಡೆದಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಯುವಕ ಗಣೇಶ್​ ಯುವತಿಯನ್ನು ಮದುವೆಯಾಗಲು ಬಯಸಿದ್ದ , ಆಕೆಯು ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು.

ಯುವತಿ ಹೈದರಾಬಾದ್​ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು, ಹಾಸ್ಟೆಲ್​ವೊಂದರಲ್ಲಿ ವಾಸವಿದ್ದಳು. ಗಣೇಶ್​ ಮಂಗಳವಾರ ರಾತ್ರಿ ಹುಡುಗಿಯ ಹಾಸ್ಟೆಲ್​ಗೆ ಹೋಗಿ ಪುಪ್ಪಲಗುಡದ ಹೋಟೆಲ್​ ಬಳಿ ಕರೆದೊಯ್ದಿದ್ದ, ಅಲ್ಲಿ ಮತ್ತೊಮ್ಮೆ ಮದುವೆ ಪ್ರಸ್ತಾಪ ಇಟ್ಟಿದ್ದ, ಆಕೆ ಮತ್ತೆ ತಿರಸ್ಕರಿಸಿದ್ದಾಳೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಮತ್ತಷ್ಟು ಓದಿ: Hassan News: ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು ಮನೆ ಒಡತಿ ಆತ್ಮಹತ್ಯೆ; ಮಗಳ ಸಾವಿನ ಸುದ್ದಿ ಕೇಳಿ ಸಾವನ್ನಪ್ಪಿದ ತಾಯಿ

ನಂತರ ಯುವಕ ಬ್ಯಾಗ್​ನಲ್ಲಿ ಇಟ್ಟಿದ್ದ ಚಾಕು ತೆಗೆದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕತ್ತು ಹಾಗೂ ಕೈಗಳ ಮೇಲೆ ಇರಿತದ ಗಾಯಗಳಾಗಿವೆ. ಅಲ್ಲೇ ಇದ್ದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ, ಗಣೇಶ್​ನನ್ನು ಬಂಧಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ