AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ಕೊಟ್ಟು, ವಿವಸ್ತ್ರಗೊಳಿಸಿ ವ್ಯಕ್ತಿಯಿಂದ ಹಲ್ಲೆ

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ಕೊಟ್ಟು, ಬಟ್ಟೆ ಬಿಚ್ಚಿಸಿ ವಿವಸ್ತ್ರವಾಗಿ ನಿಲ್ಲಿಸಿದ ಆಘಾತಕಾರಿ ಘಟನೆಯೊಂದು ಹೈದರಾಬಾದ್ ಹೊರವಲಯದಲ್ಲಿರುವ ಬಾಲಾಜಿ ನಗರದಲ್ಲಿನ ರಸ್ತೆಯೊಂದರಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ಕೊಟ್ಟು, ವಿವಸ್ತ್ರಗೊಳಿಸಿ ವ್ಯಕ್ತಿಯಿಂದ ಹಲ್ಲೆ
ಆರೋಪಿ-ಪೆದ್ದಮಾರಯ್ಯ
ನಯನಾ ರಾಜೀವ್
|

Updated on: Aug 09, 2023 | 8:39 AM

Share

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ಕೊಟ್ಟು, ಬಟ್ಟೆ ಬಿಚ್ಚಿಸಿ ವಿವಸ್ತ್ರವಾಗಿ ನಿಲ್ಲಿಸಿದ ಆಘಾತಕಾರಿ ಘಟನೆಯೊಂದು ಹೈದರಾಬಾದ್ ಹೊರವಲಯದಲ್ಲಿರುವ ಬಾಲಾಜಿ ನಗರದಲ್ಲಿನ ರಸ್ತೆಯೊಂದರಲ್ಲಿ ನಡೆದಿದೆ. ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಜವಾಹರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಾಜಿ ನಗರ ಬಸ್ ನಿಲ್ದಾಣದ ಬಳಿ ರಾತ್ರಿ 8.30 ರ ಸುಮಾರಿಗೆ ಆರೋಪಿ ಪೆದ್ದಮಾರಯ್ಯ ಎಂಬಾತ ಯುವತಿಗೆ ಕಿರುಕುಳ ನೀಡಿ, ಬಲವಂತವಾಗಿ ಬಟ್ಟೆ ಹರಿದು, ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿ ಕೆಟ್ಟದಾಗಿ ಸ್ಪರ್ಶಿಸಿದ್ದಾನೆ. ಯುವತಿ ಆತನನ್ನು ದೂರ ತಳ್ಳುವ ಮೂಲಕ ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿ ವೇಗವಾಗಿ ನಡೆಯಲು ಶುರು ಮಾಡಿದ್ದಳು. ಕೋಪಗೊಂಡ ಪೆದ್ದಮಾರಯ್ಯ ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಬಟ್ಟೆ ಹರಿದು ಹಾಕಿ, ವಿವಸ್ತ್ರಗೊಳಿಸಿದ್ದಾನೆ.

ಮತ್ತಷ್ಟು ಓದಿ: ಆರೋಗ್ಯ ಸರಿಪಡಿಸುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ತಾಂತ್ರಿಕ, ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಕಿ

ಆತ ಕೂಲಿಕಾರ್ಮಿಕನಾಗಿದ್ದು, ನಿತ್ಯ ಕುಡಿದುಕೊಂಡೇ ಮನೆಗೆ ಬರುತ್ತಿದ್ದ, ಆತನ ಜತೆ ಆತನ ತಾಯಿ ಇದ್ದರೂ ಕೂಡ ಈ ಕೃತ್ಯವನ್ನು ತಡೆಯಲಿಲ್ಲ ಎನ್ನುವುದು ವಿಪರ್ಯಾಸ. ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ಮಧ್ಯಪ್ರವೇಶಿಸಿ ಹಲ್ಲೆಯನ್ನು ತಡೆಯಲು ಯತ್ನಿಸಿದರು. ಆಕೆಯ ಕೃತ್ಯದಿಂದ ಕುಪಿತಗೊಂಡ ಆರೋಪಿ ಆಕೆಯ ಮೇಲೆ ಕೂಡ ಹಲ್ಲೆಗೆ ಯತ್ನಿಸಿದ್ದಾನೆ.

ಆರೋಪಿಯ ಮೇಲೆ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐಎಎನ್‌ಎಸ್ ವರದಿಯ ಪ್ರಕಾರ ಯುವತಿ ಸುಮಾರು 15 ನಿಮಿಷಗಳ ಕಾಲ ರಸ್ತೆಯಲ್ಲಿ ಬೆತ್ತಲೆಯಾಗಿದ್ದರು.

ಆರೋಪಿ ಸ್ಥಳದಿಂದ ಹೋದ ಬಳಿಕ ಅಲ್ಲಿದ್ದವರು, ಆಕೆಗೆ ಬಟ್ಟೆ ನೀಡಿದರು, ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಆರೋಪಿಯು ಸ್ಥಳದಿಂದ ಹೋದ ನಂತರ, ಹಲವಾರು ವ್ಯಕ್ತಿಗಳು ಆಕೆಗೆ ಹೊದಿಕೆ ನೀಡಲು ಮುಂದಾದರು ಮತ್ತು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್