AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪ್ರತಿಭಟನೆ

ಪ್ರಾಥಮಿಕ ಮಾಹಿತಿ ವರದಿ ಪ್ರಕಾರ ಮೇ 28ರಂದು ಮಧ್ಯಾಹ್ನ ನನ್ನ ಮಗಳು ಆಕೆಯ ಫ್ರೆಂಡ್ ಆತಿಥ್ಯ ವಹಿಸಿದ ಪಾರ್ಟಿಯಲ್ಲಿ ಭಾಗವಹಿಸಲು ಜುಬಿಲಿ ಹಿಲ್ಸ್ ಗೆ ಹೋಗಿದ್ದಳು ಎಂದು ಸಂತ್ರಸ್ತೆಯ ಅಪ್ಪ ಹೇಳಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಗಾಯವಾಗಿತ್ತು.

Watch ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪ್ರತಿಭಟನೆ
ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪ್ರತಿಭಟನೆ
TV9 Web
| Edited By: |

Updated on:Jun 03, 2022 | 9:35 PM

Share

ಹೈದರಾಬಾದ್: ಬಂಜಾರಾ ಹಿಲ್ಸ್‌ನಲ್ಲಿ ಮರ್ಸಿಡಿಸ್ ಬೆಂಜ್ ಕಾರಿನೊಳಗೆ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang rape) ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಶುಕ್ರವಾರ ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ (Jubilee Hills police station) ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಪಕ್ಷದ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವುದು ವಿಡಿಯೊದಲ್ಲಿ ಕಾಣಬಹುದು. ಈ ವಿಡಿಯೊ ಶೇರ್ ಮಾಡಿರುವ ಎಎನ್ಐ ಸುದ್ದಿಸಂಸ್ಥೆ ಪ್ರತಿಭಟನೆಯ ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಮಾಡಿದೆ. ಮೇ 28ರಂದು ಬಂಜಾರಾ ಹಿಲ್ಸ್ ನಲ್ಲಿರುವ ಪಬ್​​ವೊಂದರಲ್ಲಿ ನಡೆದ ಪಾರ್ಟಿಯಲ್ಲಿ ಪಾಲ್ಗೊಂಡು ವಾಪಸ್ ಬರುವಾಗ ನಾಲ್ಕು ಅಪ್ರಾಪ್ತರು ಬಾಲಕಿಯನ್ನು ಕಾರಿನೊಳಗೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಘಟನೆ ಬಗ್ಗೆ ಮೇ31ರಂದು ಸಂತ್ರಸ್ತೆಯ ಕುಟುಂಬದವರು ದೂರು ನೀಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹೆಸರು ಹೇಳಲು ಬಯಸದ ಪೊಲೀಸ್ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್ ಜತೆ ಮಾತನಾಡಿದ್ದು, ಹೈದರಾಬಾದ್​​​​ನ ಹಳೇ ನಗರದ ಶಾಸಕರ ಮಗನೂ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಹೆಚ್ಚಿನ ಮಾಹಿತಿಗಳು ತನಿಖೆ ನಂತರವೇ ಹೊರಬರಲಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿ ವರದಿ ಪ್ರಕಾರ ಮೇ 28ರಂದು ಮಧ್ಯಾಹ್ನ ನನ್ನ ಮಗಳು ಆಕೆಯ ಫ್ರೆಂಡ್ ಆತಿಥ್ಯ ವಹಿಸಿದ ಪಾರ್ಟಿಯಲ್ಲಿ ಭಾಗವಹಿಸಲು ಜುಬಿಲಿ ಹಿಲ್ಸ್ ಗೆ ಹೋಗಿದ್ದಳು ಎಂದು ಸಂತ್ರಸ್ತೆಯ ಅಪ್ಪ ಹೇಳಿದ್ದಾರೆ. ಆಕೆಯ ಕುತ್ತಿಗೆಯಲ್ಲಿ ಗಾಯವಾಗಿತ್ತು. ಆಕೆ ಅದೆಷ್ಟು ಆಘಾತಕ್ಕೀಡಾಗಿದ್ದಳು ಎಂದರೆ ಅಲ್ಲಿ ಏನು ನಡೆಯಿತು ಎಂಬುದನ್ನು ಹೇಳಲೂ ಆಕೆಗೆ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ; ರೇಖಾ ಆರೋಪಕ್ಕೆ ಸ್ಪಷ್ಟನೆ ನೀಡಿದ ಪತ್ನಿ ಸುಮಾ
Image
ಬಿಜೆಪಿ ಹಿಂದುತ್ವ ಹೆಸರಿನಲ್ಲಿ ಕಾಶ್ಮೀರದಲ್ಲಿ ಮತಗಳಿಸಲು ಯತ್ನಿಸುತ್ತಿದೆಯೇ ಹೊರತು ಜನರ ಬದುಕನ್ನು ಉತ್ತಮಗೊಳಿಸುತ್ತಿಲ್ಲ: ಸಂಜಯ್ ರಾವುತ್
Image
Hyderabad Gangrape ಹೈದರಾಬಾದ್: ಮರ್ಸಿಡೆಸ್ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಆರಂಭದಲ್ಲಿ ಭಾರತೀಯ ದಂಡ ಸಂಹಿತೆ ಮತ್ತು POCSO ಕಾಯಿದೆಯ ಸೆಕ್ಷನ್ 354 (ದಾಳಿ ಅಥವಾ ಕ್ರಿಮಿನಲ್ ಶಕ್ತಿ) ಸೆಕ್ಷನ್ 354 ಅಡಿಯಲ್ಲಿ ಹೆಸರಿಸದ ಆರೋಪಿಗಳನ್ನು ದಾಖಲಿಸಿದ್ದಾರೆ. ಗುರುವಾರ ಪೊಲೀಸರು ಹುಡುಗಿಯೊಂದಿಗೆ ಮಾತನಾಡಿದ ನಂತರ ಮತ್ತು ಆಕೆಯ ವೈದ್ಯಕೀಯ ಪರೀಕ್ಷೆಯ ವರದಿಯ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 (ಗ್ಯಾಂಗ್ ರೇಪ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:32 pm, Fri, 3 June 22

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್