AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ
Crime Scene
ರಶ್ಮಿ ಕಲ್ಲಕಟ್ಟ
|

Updated on:Feb 26, 2023 | 1:37 PM

Share

ಹೈದರಾಬಾದ್: ತನ್ನ ಗರ್ಲ್​​ಫ್ರೆಂಡ್​​ಗೆ ಸಂದೇಶ ಮತ್ತು ಕರೆ ಮಾಡಿದ್ದಕ್ಕಾಗಿ 22 ವರ್ಷದ ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಂದ ಘಟನೆ ಹೈದರಾಬಾದ್​​ನಿಂದ(Hyderabad) ವರದಿ ಆಗಿದೆ. ಹತ್ಯೆಯಾದ ವ್ಯಕ್ತಿಯೊಂದಿಗೆ ಆರೋಪಿ ಯುವಕನ ಗರ್ಲ್​​ಫ್ರೆಂಡ್​​ಗೆ(Girlfriend) ಪ್ರೇಮಸಂಬಂಧವಿತ್ತು. ಈ ಕೊಲೆ ಅದೆಷ್ಟು ಪೈಶಾಚಿಕವಾಗಿತ್ತೆಂದರೆ ಆರೋಪಿ ತನ್ನ ಸ್ನೇಹಿತನ ಶಿರಚ್ಛೇದ ಮಾಡಿ, ಆತನ ಹೃದಯ ಮತ್ತು ಖಾಸಗಿ ಅಂಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿದ್ದ. ನಂತರ ತಾನೇ ಶರಣಾಗಲು ಶನಿವಾರ ಪೊಲೀಸ್ ಠಾಣೆಗೆ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ಹೇಳಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವರವಾದ ತನಿಖೆ ಕೈಗೊಂಡಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸರ ಪ್ರಕಾರ, ನವೀನ್ ಮತ್ತು ಹರಿಹರ ಕೃಷ್ಣ ಅವರು ದಿಲ್‌ಸುಖ್‌ನಗರದ ಕಾಲೇಜಿನಲ್ಲಿ ತಮ್ಮ ಇಂಟರ್‌ಮೀಡಿಯೇಟ್ ಅನ್ನು ಒಟ್ಟಿಗೆ ಮುಗಿಸಿದ್ದಾರೆ. ಘಟನೆಯ ಕೇಂದ್ರಬಿಂದುವಾಗಿರುವ ಹುಡುಗಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.

ಇಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು, ಆದರೆ ನವೀನ್ ಮೊದಲು ಆಕೆಗೆ ಪ್ರೊಪೋಸ್ ಮಾಡಿದ್ದು ಅದನ್ನು ಆಕೆ ಒಪ್ಪಿಕೊಂಡಿದ್ದಳು.ಒಂದೆರಡು ವರ್ಷಗಳ ನಂತರ ಇಬ್ಬರೂ ಬೇರೆಯಾದರು. ಇದಾದ ನಂತರ ಹುಡುಗಿ ಹರಿಹರ ಕೃಷ್ಣನ ಗರ್ಲ್ ಫ್ರೆಂಡ್ ಆಗಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ಲವ್ ಬ್ರೇಕ್ ಅಪ್ ಆಗಿದ್ದರೂ ನವೀನ್ ಹುಡುಗಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಗೆ ಸಂದೇಶ ಮತ್ತು ಕರೆಗಳನ್ನು ಮಾಡುತ್ತಿದ್ದ, ಇದು ಕೃಷ್ಣನನ್ನು ತೀವ್ರವಾಗಿ ಅಸಮಾಧಾನಗೊಳಿಸಿತು. ಸ್ನೇಹಿತನ ಮೇಲೆ ಸಿಟ್ಟು ತೀರಿಸಲು ಅವಕಾಶಕ್ಕಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಕಾದಿದ್ದ ಕೃಷ್ಣ.

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟೇ ಅಲ್ಲ ಕೊಲೆ ಮಾಡಿದ ನಂತರ ಅದರ ಫೋಟೊ ತೆಗೆದು ಈತ ಗರ್ಲ್​​ಫ್ರೆಂಡ್​​ಗೆ ವಾಟ್ಸಾಪ್‌ನಲ್ಲಿ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Sun, 26 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ