AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ
Crime Scene
ರಶ್ಮಿ ಕಲ್ಲಕಟ್ಟ
|

Updated on:Feb 26, 2023 | 1:37 PM

Share

ಹೈದರಾಬಾದ್: ತನ್ನ ಗರ್ಲ್​​ಫ್ರೆಂಡ್​​ಗೆ ಸಂದೇಶ ಮತ್ತು ಕರೆ ಮಾಡಿದ್ದಕ್ಕಾಗಿ 22 ವರ್ಷದ ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಂದ ಘಟನೆ ಹೈದರಾಬಾದ್​​ನಿಂದ(Hyderabad) ವರದಿ ಆಗಿದೆ. ಹತ್ಯೆಯಾದ ವ್ಯಕ್ತಿಯೊಂದಿಗೆ ಆರೋಪಿ ಯುವಕನ ಗರ್ಲ್​​ಫ್ರೆಂಡ್​​ಗೆ(Girlfriend) ಪ್ರೇಮಸಂಬಂಧವಿತ್ತು. ಈ ಕೊಲೆ ಅದೆಷ್ಟು ಪೈಶಾಚಿಕವಾಗಿತ್ತೆಂದರೆ ಆರೋಪಿ ತನ್ನ ಸ್ನೇಹಿತನ ಶಿರಚ್ಛೇದ ಮಾಡಿ, ಆತನ ಹೃದಯ ಮತ್ತು ಖಾಸಗಿ ಅಂಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿದ್ದ. ನಂತರ ತಾನೇ ಶರಣಾಗಲು ಶನಿವಾರ ಪೊಲೀಸ್ ಠಾಣೆಗೆ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ಹೇಳಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವರವಾದ ತನಿಖೆ ಕೈಗೊಂಡಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸರ ಪ್ರಕಾರ, ನವೀನ್ ಮತ್ತು ಹರಿಹರ ಕೃಷ್ಣ ಅವರು ದಿಲ್‌ಸುಖ್‌ನಗರದ ಕಾಲೇಜಿನಲ್ಲಿ ತಮ್ಮ ಇಂಟರ್‌ಮೀಡಿಯೇಟ್ ಅನ್ನು ಒಟ್ಟಿಗೆ ಮುಗಿಸಿದ್ದಾರೆ. ಘಟನೆಯ ಕೇಂದ್ರಬಿಂದುವಾಗಿರುವ ಹುಡುಗಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.

ಇಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು, ಆದರೆ ನವೀನ್ ಮೊದಲು ಆಕೆಗೆ ಪ್ರೊಪೋಸ್ ಮಾಡಿದ್ದು ಅದನ್ನು ಆಕೆ ಒಪ್ಪಿಕೊಂಡಿದ್ದಳು.ಒಂದೆರಡು ವರ್ಷಗಳ ನಂತರ ಇಬ್ಬರೂ ಬೇರೆಯಾದರು. ಇದಾದ ನಂತರ ಹುಡುಗಿ ಹರಿಹರ ಕೃಷ್ಣನ ಗರ್ಲ್ ಫ್ರೆಂಡ್ ಆಗಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ಲವ್ ಬ್ರೇಕ್ ಅಪ್ ಆಗಿದ್ದರೂ ನವೀನ್ ಹುಡುಗಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಗೆ ಸಂದೇಶ ಮತ್ತು ಕರೆಗಳನ್ನು ಮಾಡುತ್ತಿದ್ದ, ಇದು ಕೃಷ್ಣನನ್ನು ತೀವ್ರವಾಗಿ ಅಸಮಾಧಾನಗೊಳಿಸಿತು. ಸ್ನೇಹಿತನ ಮೇಲೆ ಸಿಟ್ಟು ತೀರಿಸಲು ಅವಕಾಶಕ್ಕಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಕಾದಿದ್ದ ಕೃಷ್ಣ.

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟೇ ಅಲ್ಲ ಕೊಲೆ ಮಾಡಿದ ನಂತರ ಅದರ ಫೋಟೊ ತೆಗೆದು ಈತ ಗರ್ಲ್​​ಫ್ರೆಂಡ್​​ಗೆ ವಾಟ್ಸಾಪ್‌ನಲ್ಲಿ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Sun, 26 February 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?