AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಹೈದರಾಬಾದ್: ಗರ್ಲ್​​ಫ್ರೆಂಡ್​​ಗೆ ಕರೆ ಮಾಡಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿ ಹೃದಯ ಕಿತ್ತು, ಬೆರಳು ಕತ್ತರಿಸಿದ ಯುವಕ
Crime Scene
ರಶ್ಮಿ ಕಲ್ಲಕಟ್ಟ
|

Updated on:Feb 26, 2023 | 1:37 PM

Share

ಹೈದರಾಬಾದ್: ತನ್ನ ಗರ್ಲ್​​ಫ್ರೆಂಡ್​​ಗೆ ಸಂದೇಶ ಮತ್ತು ಕರೆ ಮಾಡಿದ್ದಕ್ಕಾಗಿ 22 ವರ್ಷದ ಯುವಕನೊಬ್ಬ ತನ್ನ ಸ್ನೇಹಿತನನ್ನು ಕೊಂದ ಘಟನೆ ಹೈದರಾಬಾದ್​​ನಿಂದ(Hyderabad) ವರದಿ ಆಗಿದೆ. ಹತ್ಯೆಯಾದ ವ್ಯಕ್ತಿಯೊಂದಿಗೆ ಆರೋಪಿ ಯುವಕನ ಗರ್ಲ್​​ಫ್ರೆಂಡ್​​ಗೆ(Girlfriend) ಪ್ರೇಮಸಂಬಂಧವಿತ್ತು. ಈ ಕೊಲೆ ಅದೆಷ್ಟು ಪೈಶಾಚಿಕವಾಗಿತ್ತೆಂದರೆ ಆರೋಪಿ ತನ್ನ ಸ್ನೇಹಿತನ ಶಿರಚ್ಛೇದ ಮಾಡಿ, ಆತನ ಹೃದಯ ಮತ್ತು ಖಾಸಗಿ ಅಂಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿದ್ದ. ನಂತರ ತಾನೇ ಶರಣಾಗಲು ಶನಿವಾರ ಪೊಲೀಸ್ ಠಾಣೆಗೆ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ಹೇಳಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವರವಾದ ತನಿಖೆ ಕೈಗೊಂಡಿದ್ದು, ಮೃತದೇಹವನ್ನು ಶವಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸರ ಪ್ರಕಾರ, ನವೀನ್ ಮತ್ತು ಹರಿಹರ ಕೃಷ್ಣ ಅವರು ದಿಲ್‌ಸುಖ್‌ನಗರದ ಕಾಲೇಜಿನಲ್ಲಿ ತಮ್ಮ ಇಂಟರ್‌ಮೀಡಿಯೇಟ್ ಅನ್ನು ಒಟ್ಟಿಗೆ ಮುಗಿಸಿದ್ದಾರೆ. ಘಟನೆಯ ಕೇಂದ್ರಬಿಂದುವಾಗಿರುವ ಹುಡುಗಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು.

ಇಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು, ಆದರೆ ನವೀನ್ ಮೊದಲು ಆಕೆಗೆ ಪ್ರೊಪೋಸ್ ಮಾಡಿದ್ದು ಅದನ್ನು ಆಕೆ ಒಪ್ಪಿಕೊಂಡಿದ್ದಳು.ಒಂದೆರಡು ವರ್ಷಗಳ ನಂತರ ಇಬ್ಬರೂ ಬೇರೆಯಾದರು. ಇದಾದ ನಂತರ ಹುಡುಗಿ ಹರಿಹರ ಕೃಷ್ಣನ ಗರ್ಲ್ ಫ್ರೆಂಡ್ ಆಗಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ಲವ್ ಬ್ರೇಕ್ ಅಪ್ ಆಗಿದ್ದರೂ ನವೀನ್ ಹುಡುಗಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕೆಗೆ ಸಂದೇಶ ಮತ್ತು ಕರೆಗಳನ್ನು ಮಾಡುತ್ತಿದ್ದ, ಇದು ಕೃಷ್ಣನನ್ನು ತೀವ್ರವಾಗಿ ಅಸಮಾಧಾನಗೊಳಿಸಿತು. ಸ್ನೇಹಿತನ ಮೇಲೆ ಸಿಟ್ಟು ತೀರಿಸಲು ಅವಕಾಶಕ್ಕಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಕಾದಿದ್ದ ಕೃಷ್ಣ.

ಫೆಬ್ರವರಿ 17 ರಂದು ಇಬ್ಬರೂ ಮದ್ಯ ಸೇವಿಸಿ ಭಾರೀ ಜಗಳವಾಡಿದ್ದಾರೆ. ಈ ಜಗಳದಲ್ಲಿ ಕೃಷ್ಣ ನವೀನ್‌ನನ್ನು ಹತ್ಯೆಗೈದಿದ್ದಾನೆ. ಆರೋಪಿ ಕೃಷ್ಣ ನವೀನನ ತಲೆಯನ್ನು ಬೇರ್ಪಡಿಸಿ, ಅವನ ಖಾಸಗಿ ಭಾಗಗಳು, ಹೃದಯ ಮತ್ತು ಕತ್ತರಿಸಿದ ಬೆರಳುಗಳನ್ನು ತೆಗೆದುಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟೇ ಅಲ್ಲ ಕೊಲೆ ಮಾಡಿದ ನಂತರ ಅದರ ಫೋಟೊ ತೆಗೆದು ಈತ ಗರ್ಲ್​​ಫ್ರೆಂಡ್​​ಗೆ ವಾಟ್ಸಾಪ್‌ನಲ್ಲಿ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Sun, 26 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ