AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!

ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ.

ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 19, 2022 | 3:33 PM

Share

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಬಳಿ ಆಕೆಯ ಜೊತೆಗೆ ಓದುವ ಹುಡುಗನೊಬ್ಬ ಮಾತನಾಡಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಎಸ್​ಎಸ್​ಎಲ್​ಸಿ (SSLC) ಓದುತ್ತಿದ್ದ ತನ್ನ ಗರ್ಲ್​ಫ್ರೆಂಡ್ ಜೊತೆಗೆ ಅದೇ ಕ್ಲಾಸ್​ನಲ್ಲಿ ಓದುತ್ತಿದ್ದ ಇನ್ನೋರ್ವ ವಿದ್ಯಾರ್ಥಿ ಮಾತನಾಡಿದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ. ರಾಜೇಂದ್ರನಗರದಲ್ಲಿ ಮಂಗಳವಾರ ರಾತ್ರಿ 10ನೇ ತರಗತಿ ವಿದ್ಯಾರ್ಥಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕ ದುರ್ಗಾ ಪ್ರಸಾದ್ ಫಿಲ್ಮ್ ನಗರದ ಶಾಲೆಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ಸಂಜೆ ತನ್ನ ಗೆಳೆಯರೊಂದಿಗೆ ಹೊರಗೆ ಹೋಗಿದ್ದ. ಆಗ ಆತನನ್ನು ಮನೆಗೆ ಡ್ರಾಪ್​ ಮಾಡುವ ನೆಪದಲ್ಲಿ ಆತನ ಕ್ಲಾಸ್​ಮೇಟ್​ನ ಗೆಳೆಯನೊಬ್ಬ ಆತನನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದ. ಆಗ ಆತ ರಾಜೇಂದ್ರನಗರದ ಟಿಪ್ಪು ಖಾನ್ ಸೇತುವೆ ಬಳಿ ಕರೆದುಕೊಂಡು ಹೋಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ 7 ಬಾರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದುರ್ಗಾ ಪ್ರಸಾದ್ ಸಹಾಯಕ್ಕಾಗಿ ಕೂಗಿದಾಗ ಆ ಹಲ್ಲೆ ಮಾಡಿದ ವಿದ್ಯಾರ್ಥಿ ಸ್ಥಳದಿಂದ ಓಡಿಹೋದ. ನಂತರ ಸ್ಥಳೀಯ ಪೊಲೀಸ್ ಸಿಬ್ಬಂದಿ ಅವನನ್ನು ರಕ್ಷಿಸಿದರು. ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್