AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!

ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ.

ಗರ್ಲ್​ಫ್ರೆಂಡ್ ಜೊತೆ ಮಾತಾಡಿದ 10ನೇ ತರಗತಿಯ ಬಾಲಕನಿಗೆ 7 ಬಾರಿ ಚಾಕುವಿನಿಂದ ತಿವಿದ ಪಿಯುಸಿ ವಿದ್ಯಾರ್ಥಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 19, 2022 | 3:33 PM

Share

ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯ ಬಳಿ ಆಕೆಯ ಜೊತೆಗೆ ಓದುವ ಹುಡುಗನೊಬ್ಬ ಮಾತನಾಡಿದ ಎಂಬ ಕಾರಣಕ್ಕೆ ಆತನನ್ನು ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಎಸ್​ಎಸ್​ಎಲ್​ಸಿ (SSLC) ಓದುತ್ತಿದ್ದ ತನ್ನ ಗರ್ಲ್​ಫ್ರೆಂಡ್ ಜೊತೆಗೆ ಅದೇ ಕ್ಲಾಸ್​ನಲ್ಲಿ ಓದುತ್ತಿದ್ದ ಇನ್ನೋರ್ವ ವಿದ್ಯಾರ್ಥಿ ಮಾತನಾಡಿದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಗೆಳತಿಯೊಂದಿಗೆ ಮಾತನಾಡಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯನ್ನು ಪಿಯುಸಿ ವಿದ್ಯಾರ್ಥಿ ಕೊಲೆ ಮಾಡಲು ಪ್ರಯತ್ನಿಸಿರುವುದು ಭಾರೀ ಆಘಾತಕ್ಕೆ ಕಾರಣವಾಗಿದೆ. ರಾಜೇಂದ್ರನಗರದಲ್ಲಿ ಮಂಗಳವಾರ ರಾತ್ರಿ 10ನೇ ತರಗತಿ ವಿದ್ಯಾರ್ಥಿ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: Navjot Singh Sidhu 1988ರ ರಸ್ತೆ ಜಗಳ ಪ್ರಕರಣ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ

ಪೊಲೀಸರ ಪ್ರಕಾರ, ಸಂತ್ರಸ್ತ ಬಾಲಕ ದುರ್ಗಾ ಪ್ರಸಾದ್ ಫಿಲ್ಮ್ ನಗರದ ಶಾಲೆಯ ವಿದ್ಯಾರ್ಥಿಯಾಗಿದ್ದು, ಮಂಗಳವಾರ ಸಂಜೆ ತನ್ನ ಗೆಳೆಯರೊಂದಿಗೆ ಹೊರಗೆ ಹೋಗಿದ್ದ. ಆಗ ಆತನನ್ನು ಮನೆಗೆ ಡ್ರಾಪ್​ ಮಾಡುವ ನೆಪದಲ್ಲಿ ಆತನ ಕ್ಲಾಸ್​ಮೇಟ್​ನ ಗೆಳೆಯನೊಬ್ಬ ಆತನನ್ನು ಬೈಕ್​ನಲ್ಲಿ ಕರೆದುಕೊಂಡು ಹೋಗಿದ್ದ. ಆಗ ಆತ ರಾಜೇಂದ್ರನಗರದ ಟಿಪ್ಪು ಖಾನ್ ಸೇತುವೆ ಬಳಿ ಕರೆದುಕೊಂಡು ಹೋಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಮೇಲೆ ಚಾಕುವಿನಿಂದ 7 ಬಾರಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದುರ್ಗಾ ಪ್ರಸಾದ್ ಸಹಾಯಕ್ಕಾಗಿ ಕೂಗಿದಾಗ ಆ ಹಲ್ಲೆ ಮಾಡಿದ ವಿದ್ಯಾರ್ಥಿ ಸ್ಥಳದಿಂದ ಓಡಿಹೋದ. ನಂತರ ಸ್ಥಳೀಯ ಪೊಲೀಸ್ ಸಿಬ್ಬಂದಿ ಅವನನ್ನು ರಕ್ಷಿಸಿದರು. ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ