AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ರೆಸ್ಟೋರೆಂಟ್​ವೊಂದರ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು

ರೆಸ್ಟೋರೆಂಟ್​ವೊಂದರ ಮ್ಯಾನೇಜರ್​ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ ಕಿನ್ನೇರಾ ಗ್ರಾಂಡ್ ಸಂದರ್ಶಿನಿ ಹೋಟೆಲ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ರೆಸ್ಟೋರೆಂಟ್ ಉದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇವೆಂದರ್ ಗಯಾನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ

ಹೈದರಾಬಾದ್: ರೆಸ್ಟೋರೆಂಟ್​ವೊಂದರ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಗುಂಡಿನ ದಾಳಿ
ನಯನಾ ರಾಜೀವ್
|

Updated on: Aug 24, 2023 | 9:41 AM

Share

ರೆಸ್ಟೋರೆಂಟ್​ವೊಂದರ ಮ್ಯಾನೇಜರ್​ನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಗುಡಾದ ಕಿನ್ನೇರಾ ಗ್ರಾಂಡ್ ಸಂದರ್ಶಿನಿ ಹೋಟೆಲ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ರೆಸ್ಟೋರೆಂಟ್ ಉದ್ಯೋಗಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇವೆಂದರ್ ಗಯಾನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮಾದಾಪುರ ಡಿಸಿಪಿ ಸಂದೀಪ್ ಮಿಯಾಪುರ ಪೊಲೀಸರೊಂದಿಗೆ ಘಟನಾ ಸ್ಥಳದಲ್ಲಿ 6 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಮೃತರನ್ನು ಹೋಟೆಲ್‌ನ ಜನರಲ್ ಮ್ಯಾನೇಜರ್ ಎಂದು ಗುರುತಿಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ ದೇವೇಂದರ್ ಮೇಲೆ ದುಷ್ಕರ್ಮಿಗಳು ಒಟ್ಟು ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಹೋಟೆಲ್‌ನಿಂದ ಮನೆಗೆ ತೆರಳಲು ಮುಂದಾದಾಗ ದೇವೆಂದರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲ್ಮೆಟ್ ಧರಿಸಿ ಬೈಕ್​ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಂಟ್ರಿಮೇಡ್ ಪಿಸ್ತೂಲಿನಿಂದ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಪತ್ರಕರ್ತನ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಿದ ಆಗಂತುಕರು

ಶೂಟರ್‌ಗಳು ಕೋಲ್ಕತ್ತಾದವರೆಂದು ಶಂಕಿಸಲಾಗಿದೆ ಮತ್ತು ಬಹುಶಃ ಮೃತರಿಗೆ ನಿಕಟ ಸಂಬಂಧವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗುಂಡು ಹಾರಿಸಿ ಕೋಲ್ಕತ್ತಾಗೆ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಹೋಟೆಲ್ ಸಿಬ್ಬಂದಿಯ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ದೇವೇಂದರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ