AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ಐಐಟಿ-ಬಿಎಚ್​ಯು ವಿದ್ಯಾರ್ಥಿನಿಗೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ ಕಿರುಕುಳ
ಪ್ರತಿಭಟನೆImage Credit source: News.Career
ನಯನಾ ರಾಜೀವ್
|

Updated on:Nov 03, 2023 | 4:17 PM

Share

ಐಐಟಿ-ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ಹಾಸ್ಟೆಲ್ ಎದುರೇ ವಿವಸ್ತ್ರಗೊಳಿಸಿ, ಕೆಲ ಯುವಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಆಕೆ ಹಾಸ್ಟೆಲ್​ನ ಹೊರಗಡೆ ತನ್ನ ಸ್ನೇಹಿತನೊಂದಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಆಕೆ ಓಡಿ ಹೋಗಿ 20 ನಿಮಿಷಗಳ ಕಾಲ ಪ್ರಾಧ್ಯಾಪಕರ ಮನೆಯಲ್ಲಿ ಅಡಗಿ ಕುಳಿತಿದ್ದಳು.

ವಿದ್ಯಾರ್ಥಿನಿಯು ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಬಂದಾಗ ಮೋಟಾರ್‌ಸೈಕಲ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿದ್ದಾರೆ.

ಆಕೆಯನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದಿದ್ದಾರೆ ಆಕೆಯ ಸ್ನೇಹಿತನಿಂದ ದೂರ ಕರೆದೊಯ್ದು, ಬಾಯಿಯನ್ನು ಮುಚ್ಚಿ, ವಿವಸ್ತ್ರಗೊಳಿಸಿದ್ದಾರೆ.

ಮತ್ತಷ್ಟು ಓದಿ: ರಾಯಚೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕೊಲೆಯೋ? ಆತ್ಮಹತ್ಯೆಯೋ? ತನಿಖೆ ಆರಂಭ

ಅಷ್ಟೇ ಅಲ್ಲದೆ ಆಕೆಯ ಫೋಟೊವನ್ನು ಕ್ಲಿಕ್ಕಿಸಿದ್ದಾರೆ, 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡಿದ್ದಾರೆ.

ಆಕೆ ತಕ್ಷಣವೇ ಓಡಿ ಹೋಗಿ ಪ್ರಾಧ್ಯಾಪಕರ ಮನೆಯನ್ನು ತಲುಪಿದ್ದಾಳೆ, ತಕ್ಷಣವೇ ಆಕೆಯನ್ನು ಮನೆಯೊಳಗೆ ಕರೆದೊಯ್ದು, ಸಮಾಧಾನಪಡಿಸಿದ್ದಾರೆ.

ವಿದ್ಯಾರ್ಥಿಯನ್ನು ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿ ತನ್ನ ಹಾಸ್ಟೆಲ್‌ಗೆ ಕರೆದೊಯ್ದರು. ಘಟನೆಯ ನಂತರ ವಿದ್ಯಾರ್ಥಿನಿ ತೀವ್ರ ಆಘಾತಕ್ಕೊಳಗಾಗಿದ್ದು, ತನ್ನ ಹಾಸ್ಟೆಲ್‌ನಿಂದ ಹೊರಬರುತ್ತಿಲ್ಲ ಎಂದು ಹೇಳಲಾಗಿದೆ. ಗಲಾಟೆಯಲ್ಲಿ ಆಕೆಯ ಸ್ನೇಹಿತೆ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:14 pm, Fri, 3 November 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್